ಹಿರಿಯ ನಾಗರಿಕರಿಗೆ, ದಿವ್ಯಾಂಗರಿಗೆ ಸಾಧನ ಸಲಕರಣೆ ವಿತರಿಸುವ ಬೃಹತ್ ಕಾರ್ಯಕ್ರಮ
ಪ್ರಯಾಗ್ ರಾಜ್, ಫೆ 28 : ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಮತ್ತು ದಿವ್ಯಾಂಗರಿಗೆ ಸಾಧನ ಸಲಕರಣ ನೀಡುವ ಯೋಜನೆಯಡಿ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣಗಳನ್ನು ವಿತರಿಸುವ ಬೃಹತ್ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಲಿದ್ದಾರೆ.
ಇದು ದೇಶದ ಬೃಹತ್ ಕಾರ್ಯಕ್ರಮವಾಗಿದ್ದು ಇದರಡಿ ಫಲಾನುಭವಿಗಳ ಸಂಖ್ಯೆ ಮತ್ತು ವಿತರಣೆಯಾಗಲಿರುವ ಸಾಧನ ಸಲಕರಣೆಗಳ ಸಂಖ್ಯೆ ಅತಿ ಹೆಚ್ಚಿದೆ. ಈ ಬೃಹತ್ ಶಿಬಿರದಲ್ಲಿ 56 ಸಾವಿರಕ್ಕೂ ಹೆಚ್ಚು ವಿವಿಧ ಸಾಧನ ಸಲಕರಣಗಳನ್ನು 26 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಈ ಎಲ್ಲ ಸಾಧನ, ಸಲಕರಣೆಗಳ ವೆಚ್ಚ 19 ಕೋಟಿ ರೂಪಾಯಿಗೂ ಹೆಚ್ಚು ಎಂದು ಮೂಲಗಳು ತಿಳಿಸಿವೆ.
ದಿವ್ಯಾಂಗರು ಮತ್ತು ಹಿರಿಯ ನಾಗರಿಕರ ದೈನಂದಿನ ಚಟುವಟಿಕೆಗಳಿಗೆ ನೆರವಾಗುವ ಸಾಧನಗಳನ್ನು ನೀಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಈ ಮೂಲಕ ಅವರ ಸಾಮಾಜಿಕ – ಆರ್ಥಿಕ ಅಭಿವೃದ್ಧಿಗೆ ನೆರವಾಗುವ ಆಶಯ ಹೊಂದಲಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 