ಮಾನವ ಜನ್ಮ ದೊಡ್ಡದು: ಸಂಗಮೇಶ
Human birth is great: Sangamesha
ತಾಳಿಕೋಟೆ 09: ಭಗವಂತ ಸೃಷ್ಟಿಸಿರುವ ಈ ಜಗತ್ತಿನಲ್ಲಿ ಮಾನವ ಜನ್ಮ ಬಹುದೊಡ್ಡದು 84 ಲಕ್ಷ ಜೀವರಾಶಿಗಳಲ್ಲಿ ನಮಗೆ ಮಾತ್ರ ಮಾತು, ಬುದ್ದಿ, ತಿಳಿವಳಿಕೆ ನೀಡಿದ್ದು ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರವಚನಕಾರ ಅಂಬಳನೂರ ಸಂಗಮನಾಥ ದೇವರು ಹೇಳಿದರು.
ಅವರು ಪಟ್ಟಣದ ಶ್ರೀ ಖಾಸ್ಕತ ಮಹಾಶಿವಯೋಗಿಗಳವರ 129ನೆ ಹಾಗೂ ವಿರಕ್ತ ಮಹಾಸ್ವಾಮಿಗಳ 11ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಶ್ರೀ ಖಾಸ್ಸತೇಶ್ವರ ಮಠದಲ್ಲಿ ಭಾನುವಾರ ಪ್ರಾರಂಭವಾದ ಆಧ್ಯಾತ್ಮಿಕ ಪ್ರವಚನಕ್ಕೆ ಚಾಲನೆ ನಿಡಿ ಮಾತನಾಡಿದರು. ಖಾಸ್ಗತೇಶ್ವರ ಮಠದ ಪೀಠಾಧಿಪತಿ ಬಾಲ ಶಿವಯೋಗಿ ಸಿದ್ದಲಿಂಗ ದೇವರ ಅಧ್ಯಕ್ಷತೆ ವಹಿಸಿದ್ದರು. ಗವಾಯಿಗಳಾಗಿ ಮಹೇಶಕುಮಾರ ಭಂಟನೂರ, ಬಸನಗೌಡ ಬಿರಾದಾರ ಚೋಕಾವಿ ಕಾರ್ಯನಿರ್ವಹಿಸುತ್ತಿದ್ದಾರೆ ಸೆ. 12ರವರೆಗೆ ಪ್ರತಿ ಸಂಜೆ 7ರಿಂದ 8.30 ಗಂಟೆಯವರೆಗೆ ಈ ಆಧ್ಯಾತ್ಮಿಕ ಪ್ರವಚನ ನಡೆಯುವುದು. ಸೆ.12ರಂದು ನಸುಕಿನ ಜಾವ 5 ಗಂಟೆಗೆ ಉಭಯಶ್ರೀಗಳ ಗದ್ದುಗೆಗೆ ಮಹಾರುದ್ರಾಭಿಷೇಕ ನಡೆಯಲಿದ್ದು, ಮಹಾಪ್ರಸಾದ ಜರುಗುವುದು. ಅಂದು ಸಂಜೆ 7 ಗಂಟೆಗೆ ಹರ-ಗುರು ಚರಮೂರ್ತಿಗಳಿಂದ ಧರ್ಮಸಭೆ ಹಾಗೂ ಸಂಗೀತ ಕಾರ್ಯಕ್ರಮ ಜರುಗಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 