ಹುನಗುಂದ: ಮಕ್ಕಳಿಗೆ ಪೋಕ್ಸೋ ಅರಿವು ಕಾರ್ಯಕ್ರಮ
ಹಾವೇರಿ: ಬೆಂಗಳೂರು ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಹಯೋಗದಲ್ಲಿ "ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಗುರಿ, ಉದ್ದೇಶ, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಹಾಗೂ ಪೋಕ್ಸೋ ಕಾಯ್ದೆ-2012 ಕುರಿತು ಶಾಲಾ ಮಕ್ಕಳಿಗೆ ಅರಿವು ಕಾರ್ಯಕ್ರಮ ಮಂಗಳವಾರ ಶಿಗ್ಗಾಂವ ತಾಲೂಕು ಹುನಗುಂದ ಗ್ರಾಮದ ಸಕರ್ಾರಿ ಪ್ರೌಢಶಾಲೆಯಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟಿಸಿದ ಶಿಗ್ಗಾಂವ ತಾಲೂಕು ಶಿಶು ಅಭಿವೃದ್ಧಿ ಯೋಜನಾದಿಕಾರಿ ಅಣಪ್ಪ ಹೆಗಡೆ ಅವರು ಬೇಟಿ ಬಚಾವೋ ಬೇಟಿ ಪಡಾವೋ ಮತ್ತು ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ-2012, ಬಾಲ ಕಾಮರ್ಿಕತೆ, ಮಕ್ಕಳ ರಕ್ಷಣಾ ಸಮಿತಿ, ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗ್ರಾ.ಪಂ.ಕಾರ್ಯದಶರ್ಿ ಆರ್.ಜಿ.ಹಿರೇಮಠ ಅವರು ಮಾತನಾಡಿ, ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕು.ಸರೋಜಾ ತಳವಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯಶ್ರೀ ಕಾವಲಕೊಪ್ಪ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 