ಬಹಾಮಾಸ್ ನಲ್ಲಿ ಚಂಡಮಾರುತ: ಮೃತರ ಸಂಖ್ಯೆ 30ಕ್ಕೆ ಏರಿಕೆ
ಮಾಸ್ಕೋ, ಸೆಪ್ಟೆಂಬರ್ 6: ಬಹಾಮಾಸ್ ನಲ್ಲಿ ಡೋರಿಯನ್ ಎಂಬ ಚಂಡಮಾರುತದಿಂದ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಜೊತೆಗೆ ಹೆಚ್ಚಿನ ಆಸ್ತಿಪಾಸ್ತಿಗೆ ನಷ್ಟವಾಗಿದೆ ಎಂದು ಪ್ರಧಾನಿ ಹಬಟರ್್ ಮಿನ್ನಿಸ್ ಹೇಳಿದ್ದಾರೆ. ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದು ಅವರ ಪ್ರಕಾರ ಸಾವಿನ ಸಂಖ್ಯೆ 30 ದಾಟಿದೆ ಎಂದು ಅವರು ಗುರುವಾರ ಸಿಎನ್ಎನ್ ಸುದ್ದಿವಾಹಿನಿಗೆ ತಿಳಿಸಿ, ಜೊತೆಗೆ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯೂ ಇದೆ ಎಂದು ಅವರು ಹೇಳಿದರು. ದ್ವೀಪ ರಾಷ್ಟ್ರದ ಒಂದು ಸಣ್ಣ ಭಾಗದಲ್ಲಿ ಮಾತ್ರ ಚಂಡಮಾರುತ ಭೂಕುಸಿತವನ್ನು ಉಂಟುಮಾಡಿ, ಹೆಚ್ಚು ಹಾನಿ ಮಾಡಿದೆ ಅಬಾಕೋ ದ್ವೀಪಗಳಲ್ಲಿನ 80 ಜನರನ್ನು ರಕ್ಷಿಸಿ, ಬೇರಡೆಗೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಂಡಮಾರುತವು ವಾರಾಂತ್ಯದಲ್ಲಿ ಬಹಾಮಾಸ್ ತಲುಪಿ ಎರಡು ದಿನಗಳಿಂದ ದ್ವೀಪ ರಾಷ್ಟ್ವವನ್ನು ತಲ್ಲಣಗೊಳಿಸಿದೆ. ಅಂತಾರಾಷ್ಟ್ರೀಯ ರೆಡ್ಕ್ರಾಸ್ನ ಪ್ರಕಾರ, ಚಂಡಮಾರುತದಿಂದ ಸುಮಾರು 13,ಸಾವಿರ ಮನೆಗಳು ಹಾನಿಗೆ ಒಳಗಾಗಿವೆ ಜೊತೆಗೆ ಭಾರಿ ಪ್ರಮಾಣದ ಆಸ್ತಿಪಾಸ್ತಿಗೂ ಹಾನಿಯಾಗಿದೆ ಎಂದೂ ವರದಿಯಾಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 