ಬುಲ್ಬುಲ್ ಚಂಡಮಾರುತ ಅಬ್ಬರ: ಹಲವು ರಾಜ್ಯದಲ್ಲಿ ಅಲರ್ಟ್ ಘೋಷಣೆ
ನವದೆಹಲಿ,ನ 7: ಪಶ್ಚಿಮಕ್ಕೆ ಅಪ್ಪಳಿಸಿರುವ ಮಹಾ ಚಂಡಮಾರುತ ದಿನೆ ದಿನೇ ದುರ್ಬಲಗೊಳ್ಳುತ್ತಿದ್ದರೂ ಪೂರ್ವದಲ್ಲಿನ ಬುಲ್ ಬುಲ್ ಚಂಡಮಾರುತದ ಅರ್ಬಟ ಜೋರಾಗುತ್ತಿರುವುದು ದೇಶದ ಹಲವೆಡೆ ಆತಂಕ, ತಲ್ಲಣ ಮೂಡಿಸಿದ್ದು, ಗುಜರಾತಿನ ಹಲವಡೆ ಮಳೆಯಾಗುತ್ತಿದೆ. ಇದರ ಜೊತೆಗೆ ಇತರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಓಡಿಶಾ, ಪಶ್ಚಿಮಬಂಗಾಳದಲ್ಲಿ ಅಲರ್ಟ್ ಘೋಷಿಸಲಾಗಿದೆ . ದೇಶದ ಪೂರ್ವ ಹಾಗೂ ಪಶ್ಚಿಮ ಕರಾವಳಿ ತೀರಗಳು ಈಗ ಚಂಡಮಾರುತಕ್ಕೆ ಸಿಲುಕಿ ತತ್ತರಿಸುತ್ತಿವೆ.ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಈ ಚಂಡಮಾರುತದಿಂದ ದೇಶದ ಅನೇಕ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಮುಂದಿನ 24ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ . ಮುಂಬೈನ ಹಲವು ಕಡೆ ಸಾಧಾರಣ ಮಳೆಯಾಗಲಿದೆ ಎಂದೂ ಹವಾಮಾನ ಇಲಾಖೆ ಹೇಳಿದೆ. ಬುಲ್ಬುಲ್ ಚಂಡಮಾರುತ ಓಡಿಶಾ ಪ್ರವೇಶಿಸುವ ಸಾಧ್ಯತೆ ಕ್ಷೀಣಿಸಿದ್ದು ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾ ಕರಾವಳಿ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಎರಡೂ ಚಂಡಮಾರುತಗಳ ಹಿನ್ನಲೆಯಲ್ಲಿ ಗುಜರಾತ್, ಮಹಾರಾಷ್ಟ್ರ ಹಾಗೂ ಓಡಿಶಾ, ಪಶ್ಚಿಮಬಂಗಾಳ ರಾಜ್ಯಗಳ ಎಲ್ಲ ಜಿಲ್ಲೆಗಳಲ್ಲೂ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ತಿಳುವಳಿಕೆ ನೀಡಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 