2028ಕ್ಕೆ ನಾನೇ ಸಿಎಂ ಅಭ್ಯರ್ಥಿ : ಸಚಿವ ಸತೀಶ ಜಾರಕಿಹೊಳಿ
I am CM candidate for 2028: Minister Satish Jarakiholi
ರಾಯಚೂರು 06: ಸದ್ಯಕ್ಕೆ ಮುಖ್ಯಮಂತ್ರಿಗಳು ಇದ್ದಾರೆ. ಸಿಎಂ ಬದಲಾವಣೆ ವಿಚಾರ ಬರುವುದಿಲ್ಲ. 2028ಕ್ಕೆ ನಾನೇ ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ. ಕಾದು ನೋಡಬೇಕು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಹಸ್ಯ ಸಭೆ ಏನು ಇರಲಿಲ್ಲ. ಎಲ್ಲರೂ ಕೂಡಿಯೇ ಸಭೆ ಮಾಡಿದ್ದು, ರಹಸ್ಯ ಸಭೆ ಎನ್ನುವ ಪ್ರಶ್ನೆಯೇ ಇಲ್ಲ. ಅದು ಊಟದ ಸಭೆ ಅಷ್ಟೇ. ಸಭೆಯಲ್ಲಿ ಅಂಥದ್ದೇನು ಚರ್ಚೆ ಯಾವುದು ಆಗಿಲ್ಲ. ಸಂಪುಟ ವಿಸ್ತರಣೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಸ್ ದರ ಏರಿಕೆಗೆ ಬಿಜೆಪಿಯವರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಹಣಕಾಸು ಸಚಿವ ಹಳೆಗಾಡಿಗಳಿಗೆ ಶೇ.18ರಷ್ಟು ಜಿಎಸ್ ಟಿ ಹಾಕಿದ್ದಾರೆ ಅದರ ಬಗ್ಗೆ ಪ್ರತಿಭಟನೆ ಇಲ್ಲ. ಬರೀ ರಾಜ್ಯದ ಬಸ್ ದರ ಒಂದೇ ನೋಡಿದರೆ ಹೇಗೆ ಎಂದು ಪ್ರಶ್ನಿಸಿದರು.
ಹಿಂದಿನ ಸರ್ಕಾರ ಬಜೆಟ್ ಸಪೋರ್ಟ್ ಇಲ್ಲದೆ ಕೆಲಸ ಮಾಡಿದ್ದಾರೆ. 1000 ಕೋಟಿ ಬಜೆಟ್ ಇದೆ. ಸಾವಿರ ಕೋಟಿ ಕೆಲಸ ಆಗಿದ್ದರೆ ಅದು ಬಿಡುಗಡೆ ಮಾಡಬೇಕು. 1000 ಕೋಟಿ ಬಜೆಟ್ ಇಟ್ಟುಕೊಂಡು 3 ಸಾವಿರ ಕೋಟಿ ಕೆಲಸ ಮಾಡಿದ್ದರೆ ಹೇಗೆ ಆಗುತ್ತದೆ. ಫೈನಾನ್ಸ್ ಸಪೋರ್ಟ್ ಇಲ್ಲದೆ ಕೆಲಸ ಮಾಡಿದ್ದಾರೆ. ಹೀಗಾಗಿ ಬಿಲ್ ಗಳು ಕೊಡಲು ತಡವಾಗುತ್ತಿದೆ ಎಂದರು.
ನಮ್ಮ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಕೆಲಸಗಳು ನಡೆದಿವೆ. ರಾಜ್ಯದಲ್ಲಿ ಶೇ.60ರಷ್ಟು ಪರ್ಸೆಂಟೇಸ್ ಸರ್ಕಾರ ಎಂದು ಬಿಜೆಪಿಯವರು ಆರೋಪ ಮಾಡುತ್ತಾರೆ. ಬರೀ ಆರೋಪ ಮಾಡುವುದಲ್ಲ. ಅದನ್ನು ಸಾಬೀತು ಮಾಡಬೇಕು. ಪತ್ರದಲ್ಲಿ ಪ್ರಿಯಾಂಕ ಖರ್ಗೆ ಆಪ್ತನ ಹೆಸರಿದೆ. ಈಶ್ವರಪ್ಪನದ್ದು ನೇರವಾಗಿ ಪತ್ರದಲ್ಲಿ ಹೆಸರು ಉಲ್ಲೇಖವಾಗಿತ್ತು. ಆಪ್ತರು, ಪಿಎಗಳ ಹೆಸರು ಇದ್ದರೆ ಸಚಿವರು ನೇರವಾಗಿ ಹೊಣೆಗಾರರು ಆಗಲ್ಲ. ತನಿಖೆ ನಡೆಯುತ್ತಿದೆ ನಡೆಯಲಿ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 