ನಿಮ್ಮ ಅಭಿಮಾನಕ್ಕೆ ನಾನು ಸದಾ ಚಿರಋಣಿ: ರೋಹಿಣಿ ಪಾಟೀಲ
I am forever grateful for your admiration: Rohini Patil
ನೇಸರಗಿ 19: ನಾನು ಅತೀ ಉತ್ಸಾಹದಿಂದ 48 ನೇ ವಯಸಿನಲ್ಲಿ ಕಿತ್ತೂರು ಮತಕ್ಷೇತ್ರದ ಕಾರ್ಯ ಮಾಡಲು ತಾವುಗಳು ನನ್ನ ಮೇಲೆ ಇಟ್ಟಿರುವ ವಾತ್ಸಲ್ಯ, ಅಭಿಮಾನಕ್ಕೆ ನಾನು ಚಿರಋಣಿ ಅಗಿದ್ದು.ಮುಂದಿನ ದಿನಮಾನಗಳಲ್ಲಿ ಕ್ಷೇತ್ರದಲ್ಲಿ ಕೆಲಸ ಕಾರ್ಯ ಮಾಡಲು ಪ್ರೇರಣೆ ಆಗಿದೆ ಎಂದು ಕೆ ಪಿ ಸಿ ಸಿ ಸದಸ್ಯ, ಪಂಚಮಸಾಲಿ ಲಿಂಗಾಯತ ಸಂಘಟನೆಯ ರಾಜ್ಯ ಮಹಿಳಾ ಉಪಾಧ್ಯಕ್ಷರು, ಕಿತ್ತೂರು ಕ್ಷೇತ್ರದ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರ ಧರ್ಮಪತ್ನಿ ರೋಹಿಣಿ ಪಾಟೀಲ ಹೇಳಿದರು.
ಅವರು ನೇಗಿನಹಾಳ ಗ್ರಾಮದಲ್ಲಿ ಅಭಿಮಾನಿಗಳು ಆಯೋಜಿಸಿದ್ದ 48 ನೇ ಜನ್ಮದಿನದ ಪ್ರಯುಕ್ತ ಉಚಿತ ಕಣ್ಣು ತಪಾಸಣೆ ಮತ್ತು ಅರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟನೆ ನೆರವೇರಿಸಿ ಮಾತನಾಡಿ ನಿಮ್ಮೆಲ್ಲರ ಆಶೀರ್ವಾದದ ಪಲವಾಗಿ ನಮ್ಮ ಧಣಿ ಬಾಬಾಸಾಹೇಬ ಪಾಟೀಲ ಅವರು ಶಾಸಕರಾಗಿ ಉನ್ನತ ಮಟ್ಟದ ಕಾರ್ಯ ಮಾಡುತ್ತಿದ್ದು, ಹಾಗೂ ಅವರ ಸಹೋದರ ನಾನಾಸಾಹೇಬ ಪಾಟೀಲ ಅವರು ಬಿಡಿಸಿಸಿ ಬ್ಯಾಂಕ ನಿರ್ದೇಶಕರಾಗಿದ್ದು, ನಾನು ಕೂಡ ತಮ್ಮ ಬೆಂಬಲದಿಂದ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಹೆಮ್ಮೆ ಅನಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಕ್ಷೇತ್ರದ ಅನೇಕ ನಾಯಕರು, ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ನೇಗಿನಹಾಳ ಗ್ರಾಮಕ್ಕೆ ಆಗಮಿಸಿ ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ ಅವರಿಗೆ 48 ನೇ ಹುಟ್ಟುಹಬ್ಬದ ಶುಭ ಕೋರಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 