ನಾನು ಶಹೆನ್ ಶಾಹ್ ಅಲ್ಲ: ತಮ್ಮ ಭದ್ರತೆ ಬಗ್ಗೆ ಮೋದಿ
ನವದೆಹಲಿ 03: ನಾನು ಶಹೆನ್ ಶಾಹ್ ಅಥವಾ ಚಕ್ರವತರ್ಿ ಅಲ್ಲ. ಜನರೊಂದಿಗೆ ಬೆರೆಯುವುದರಿಂದ ಮತ್ತು ಅವರ ಶುಭಹಾರೈಕೆಗಳಿಂದ ನನಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
'ಸ್ವರಾಜ್ಯ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತು ರೋಡ್ ಶೋ ನಡೆಸಬಾರದು ಎಂಬ ಬಗ್ಗೆ ಪ್ರತಿಕ್ರಿಯೆಸಿದ ಪ್ರಧಾನಿ ಮೋದಿ ಅವರು, ರಸ್ತೆಯಲ್ಲಿ ಜನ ನನ್ನ ಸ್ವಾಗತಿಸಲು ಮತ್ತು ಶುಭಾಶಯ ಕೋರಲು ಕಾಯುತ್ತಿದ್ದರೆ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಆಗುವುದಿಲ್ಲ ಎಂದರು.
ನಾನು ಶಹೆನ್?ಶಾಹ್ ಅಥವಾ ಚಕ್ರವತರ್ಿ ಅಲ್ಲ, ಜನರೊಂದಿಗೆ ಬೆರೆತರೆ ಮತ್ತಷ್ಟು ಶಕ್ತಿ ಬರುತ್ತದೆ. ನಾನು ಪ್ರಯಾಣ ಮಾಡಬೇಕಾದರೆ ರಸ್ತೆಯಲ್ಲಿ ಎಲ್ಲಾ ವಯೋಮಾನದ ನೂರಾರು ಜನರನ್ನು ನೋಡುತ್ತೇನೆ. ಅವರೆಲ್ಲರೂ ನನಗೆ ಶುಭಾಶಯ ಕೋರಲು ಮತ್ತು ಸ್ವಾಗತಿಸಲು ಬಂದಿರುತ್ತಾರೆ. ಅವರ ಪ್ರೀತಿ ಮತ್ತು ಹಾರೈಕೆಯನ್ನು ನೋಡಿಯೂ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ನಕ್ಸಲರಿಂದ ಜೀವ ಬೇದರಿಕೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇತ್ತೀಚಿಗೆ ಗೃಹ ಸಚಿವಾಲಯ ಅವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಸಾರ್ವಜನಿಕ ಯರ್ಾಲಿ ನಡೆಸದಂತೆ ಪ್ರಧಾನಿಗೆ ಸಲಹೆ ನೀಡಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 