ನಾನು ಶಹೆನ್ ಶಾಹ್ ಅಲ್ಲ: ತಮ್ಮ ಭದ್ರತೆ ಬಗ್ಗೆ ಮೋದಿ
ನವದೆಹಲಿ 03: ನಾನು ಶಹೆನ್ ಶಾಹ್ ಅಥವಾ ಚಕ್ರವತರ್ಿ ಅಲ್ಲ. ಜನರೊಂದಿಗೆ ಬೆರೆಯುವುದರಿಂದ ಮತ್ತು ಅವರ ಶುಭಹಾರೈಕೆಗಳಿಂದ ನನಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
'ಸ್ವರಾಜ್ಯ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತು ರೋಡ್ ಶೋ ನಡೆಸಬಾರದು ಎಂಬ ಬಗ್ಗೆ ಪ್ರತಿಕ್ರಿಯೆಸಿದ ಪ್ರಧಾನಿ ಮೋದಿ ಅವರು, ರಸ್ತೆಯಲ್ಲಿ ಜನ ನನ್ನ ಸ್ವಾಗತಿಸಲು ಮತ್ತು ಶುಭಾಶಯ ಕೋರಲು ಕಾಯುತ್ತಿದ್ದರೆ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಆಗುವುದಿಲ್ಲ ಎಂದರು.
ನಾನು ಶಹೆನ್?ಶಾಹ್ ಅಥವಾ ಚಕ್ರವತರ್ಿ ಅಲ್ಲ, ಜನರೊಂದಿಗೆ ಬೆರೆತರೆ ಮತ್ತಷ್ಟು ಶಕ್ತಿ ಬರುತ್ತದೆ. ನಾನು ಪ್ರಯಾಣ ಮಾಡಬೇಕಾದರೆ ರಸ್ತೆಯಲ್ಲಿ ಎಲ್ಲಾ ವಯೋಮಾನದ ನೂರಾರು ಜನರನ್ನು ನೋಡುತ್ತೇನೆ. ಅವರೆಲ್ಲರೂ ನನಗೆ ಶುಭಾಶಯ ಕೋರಲು ಮತ್ತು ಸ್ವಾಗತಿಸಲು ಬಂದಿರುತ್ತಾರೆ. ಅವರ ಪ್ರೀತಿ ಮತ್ತು ಹಾರೈಕೆಯನ್ನು ನೋಡಿಯೂ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ನಕ್ಸಲರಿಂದ ಜೀವ ಬೇದರಿಕೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇತ್ತೀಚಿಗೆ ಗೃಹ ಸಚಿವಾಲಯ ಅವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಸಾರ್ವಜನಿಕ ಯರ್ಾಲಿ ನಡೆಸದಂತೆ ಪ್ರಧಾನಿಗೆ ಸಲಹೆ ನೀಡಿತ್ತು.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 