ಸಿಎಂ ಹುದ್ದೆಗೆ ನಾನು ಬಂಡಾಯ ಮಾಡುವ ಸ್ವಭಾವದವನಲ್ಲ
I am not of the nature to rebel against the CM post
ಬೆಂಗಳೂರು : ನಾನು ಮುಖ್ಯಮಂತ್ರಿ ಆಗಲು ಪಕ್ಷದೊಳಗೆ ಹೋರಾಟ ಮಾಡುವುದಿಲ್ಲ, ಬಂಡಾಯ ಎಬ್ಬಿಸಿ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಾನು ಬೀದಿ ಹೋರಾಟಗಾರ, ಹೇಗೆ ಹೋರಾಡಬೇಕೆಂದು ನನಗೆ ಗೊತ್ತು. ನನ್ನ ಹೋರಾಟ ಅಧಿಕಾರಕ್ಕಾಗಿ ಅಲ್ಲ, ಪಕ್ಷದೊಳಗಲ್ಲ;
ನನ್ನ ಹೋರಾಟ ಪಕ್ಷದ ಹೊರಗಿದೆ. ನಾನು ಮೌನವಾಗಿದ್ದೇನೆ ಎಂದು ನನ್ನ "ರೋಧಿಗಳು ಭಾ"ಸಿದರೆ ಅದು ಅವರ ಊಹೆ ಎಂದು ಸುದ್ದಿಗ್ಠೋಯಲ್ಲಿ ಮಾತನಾಡುತ್ತಾ ಹೇಳಿದರು.
ನಾನು ಏಕೆ ಬಂಡಾಯ ಮಾಡಬೇಕು? ನನಗೆ ನನ್ನ ಮೇಲೆ "ಶ್ವಾಸ"ದೆ, ನಾನು ಆಶಾಭಾವದಿಂದ ಬದುಕುತ್ತೇನೆ. ನನಗೆ ಸಿಗಬೇಕಾದ್ದು ಸಿಕ್ಕೇ ಸಿಗುತ್ತದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಡು"ನ ಸಂಬಂಧ ಹಾಲು-ಜೇನಿನಂತಿದೆ ಎಂದು ಹೇಳಿದ್ದ ಬಗ್ಗೆ ಪ್ರತಿಕ್ರಿುಸಿದ ಅವರು, ಮುಖ್ಯಮಂತ್ರಿಯ "ಷಯವಾಗಿ ನಾನು ಇದುವರೆಗೆ ಮಾತನಾಡಿಲ್ಲ. ಅದು ನನ್ನ, ಮುಖ್ಯಮಂತ್ರಿ ಮತ್ತು ಪಕ್ಷದ ಹೈಕಮಾಂಡ್ ನಡುವೆ ಇರುವ "ಷಯ ಎಂದರು.
ಕೆಲವು ನಿರ್ಧಾರಗಳು ತೆಗೆದುಕೊಳ್ಳುವಾಗ ನಾನು ಭಾಗಿಯಾಗಿದ್ದೆ ಎಂದು ಹೇಳುವುದನ್ನು ಹೊರತುಪಡಿಸಿ ಬೇರೆ ಯಾವುದೇ ಹೇಳಿಕೆ ನೀಡಿಲ್ಲ. ಮುಖ್ಯಮಂತ್ರಿ ಸ್ಥಾನ ಖಾಲಿಯಾಗಲಿದೆ ಅಥವಾ ದಲಿತರಿಗೆ ಅಥವಾ ಇನ್ನೊಬ್ಬರಿಗೆ ಆ ಸ್ಥಾನ ಸಿಗಬೇಕು ಎಂದು ನಾನು ಎಂದಿಗೂ ಹೇಳಿಲ್ಲ. ಮುಖ್ಯಮಂತ್ರಿ ಸ್ಥಾನವನ್ನು ಖಾಲಿ ಮಾಡುತ್ತಿರುವುದು ಇತರರೇ ಎಂದು ತಮ್ಮ "ರೋಧಿಗಳಿಗೆ ತಿರುಗೇಟು ನೀಡಿದರು. ಕೆಪಿಸಿಸಿ ಅಧ್ಯಕ್ಷನಾಗಿ ಶಿಸ್ತನ್ನು ಕಾಪಾಡುವುದು ಮತ್ತು ಪಕ್ಷದ ಪ್ರತಿಷ್ಠೆಗೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳುವುದು ನನ್ನ ಹೊಣೆಗಾರಿಕೆ ಎಂದರು.
ನನ್ನ ಹುದ್ದೆಗೆ ಅನ್ಯಾಯವಾಗುವಂತಹ ಕೆಲಸ ನಾನು ಮಾಡಬಾರದು. ನಾನು ತಪ್ಪು ಮಾಡಿದ್ದೇನೆ ಎಂದು ಇತರರು ಬೆರಳು ತೋರಿಸುವಂತಾಗಬಾರದು. ನಾವು ಕಟ್ಟಿಕೊಂಡು ಬೆಳೆಸಿದ ಪಕ್ಷ ಇದು. ಸ್ವಾರ್ಥಕ್ಕಾಗಿ ನಾನು ಪಕ್ಷಕ್ಕೆ ತೊಂದರೆ ಕೊಡಲ್ಲ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ "ರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ದೆಹಲಿಯಲ್ಲಿ ನಾಯಕತ್ವದ "ಚಾರ ಚರ್ಚಿಸಿದ್ದಾರೆಯೇ ಎಂದು ಕೇಳಿದಾಗ "ಈ ಬಗ್ಗೆ ನನಗೆ ತಿಳಿದಿಲ್ಲ. ನಾನು ಅವರೊಂದಿಗೆ ಮಾತನಾಡಿಲ್ಲ," ಎಂದು ಹೇಳಿದರು.
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ 