ರಾಕೇಶ್ ಸಿದ್ದರಾಮಯ್ಯ ಸಾವಿಗೆ ನಾನು ಕಾರಣನಲ್ಲ: ಬೈರತಿ ಸುರೇಶ್
ಬೆಂಗಳೂರು, ಸೆ 22 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಾವಿಗೆ ಬೈರತಿ ಸುರೇಶ್ ಕಾರಣ ಎಂಬ ಮಾಜಿ ಸಚಿವ, ಅನರ್ಹ ಶಾಸಕ ಎಂಟಿಬಿ ನಾಗರಾಜು ಅವರ ಆರೋಪವನ್ನು ತಳ್ಳಿಹಾಕಿರುವ ಬೈರತಿ ಸುರೇಶ್, ರಾಕೇಶ್ ಸಾವಿನ ಬಗ್ಗೆ ಮೂರನೇ ವ್ಯಕ್ತಿಗೆ ಮಾತನಾಡುವ ಅವಶ್ಯಕತೆಯಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಕೇಶ್ ನನಗೆ ತಮ್ಮನ ಸಮಾನ. ಅವನ ಸಾವಿಗೆ ತಾವು ಕಾರಣವಲ್ಲ ಎಂದು ಸ್ಪಷ್ಟಪಡಿಸಿದರು.
ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಕ್ಕಾಗಿ ಹತಾಶೆಗೊಂಡಿರುವ ಎಂಟಿಬಿ ಇಂತಹ ಹೇಳಿಕೆ ನೀಡುತ್ತಿದ್ದಾರೆಯೇ ಹೊರತು ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಸಾವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಅವರ ಮನಸ್ಥಿತಿಗೆ ಹಿಡಿದ ಕನ್ನಡಿದಂತಾಗಿದೆ ಎಂದು ಬೈರತಿ ಸುರೇಶ್ ಹೇಳಿದರು.
ರಾಕೇಶ್ ಸಾವಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಬೇಕು. ಈ ವಿಚಾರದಲ್ಲಿ ಎಂಟಿಬಿ ಮೂರನೇ ವ್ಯಕ್ತಿ. ಸಂಬಂಧವಿಲ್ಲದ ವಿಷಯದ ಬಗ್ಗೆ ಮಾತನಾಡುವ ಯಾವ ಹಕ್ಕು ಅವರಿಗಿಲ್ಲ ಎಂದು ಕಿಡಿಕಾರಿದರು.
ನಾನು ಗ್ರಾ.ಪಂ ಸದಸ್ಯನಾಗಿದ್ದಾಗ ಎಂಟಿಬಿ ನಾಗರಾಜ್ ಎಲ್ಲಿದ್ದರು ಎನ್ನುವುದನ್ನು ಮೊದಲು ತಿಳಿದುಕೊಳ್ಳಲಿ. ಗ್ರಾಮಪಂಚಾಯಿತಿ ಸದಸ್ಯನಾಗಿದ್ದವನೀಗ ಶಾಸಕನಾಗಿದ್ದೇನೆ. ನಾನು ಬಚ್ಚಾ ಅಲ್ಲ.ಬೇರೆ ಮನೆಯಿಂದ ಬಂದು ಕಾಂಗ್ರೆಸ್ ನಲ್ಲಿ ವಾಸ ಮಾಡುತ್ತಿದ್ದಾರೆ ಎಂದು ಟೀಕಿಸಲು ಎಂಟಿಬಿಗೆ ಯಾವುದೇ ನೈತಿಕತೆ ಇಲ್ಲ ಎಂದರು.
ಹೊಸಕೋಟೆಯಲ್ಲಿ ಬಚ್ಚೇಗೌಡ ಕಟ್ಟಿ ಬೆಳಿಸಿದ ಮನೆಯಲ್ಲಿ ಎಂಟಿಬಿ ಈಗ ವಾಸ ಮಾಡಲು ಹೋಗುತ್ತಿರುವುದು ಸರೀಯೇ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರನ್ನು ಟೀಕಿಸಲು ಎಂಟಿಬಿಗೆ ಯಾವುದೇ ನೈತಿಕತೆ ಇಲ್ಲ. ಅವರ ಬಂಡವಾಳ ನನಗೆ ಗೊತ್ತಿದೆ. ಅವರು ನಡೆಸಿರುವ ಹಗರಣಗಳ ಬಗ್ಗೆ ತಮಗೂ ತಿಳಿದಿದೆ ಎಂದು ಮಾಮರ್ಿಕವಾಗಿ ನುಡಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 