ಸಮ್ಮಿಶ್ರ ಸರ್ಕಾರರದಲ್ಲಿ ಸಾಕಷ್ಟು ಹಿಂಸೆ ಅನುಭವಿಸಿದ್ದೆ: ಶ್ರೀಮಂತ ಪಾಟೀಲ
ಶೇಡಬಾಳ: ಸಮ್ಮಿಶ್ರ ಸಕರ್ಾರದಲ್ಲಿ ಶಾಸಕನಾದ ಸಮಯದಲ್ಲಿ ಸಾಕಷ್ಟು ಹಿಂಸೆ ಅನುಭವಿಸಿದೆ. ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಗವಾಡ ಮತಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ನೀಡಲಿಲ್ಲ. ಇದರಿಂದ ಬೇಸತ್ತು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿ ಪಕ್ಷ ಪ್ರವೇಶಿಸಿರುವುದಾಗಿ ಬಿಜೆಪಿ ಅಭ್ಯಥರ್ಿ ಶ್ರೀಮಂತ ಬಾಳಾಸಾಬ ಪಾಟೀಲ ಹೇಳಿದರು.
ಅವರು ರವಿವಾರ ದಿ. 1 ರಂದು ಮತಕ್ಷೇತ್ರದ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡುತ್ತಿದ್ದರು. ಅವರು ಮುಂದೆ ಮಾತನಾಡುತ್ತಾ ಬೇಸಿಗೆಯಲ್ಲಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಳಿಗೆ ಕೃಷ್ಣಾ ನದಿ ಬತ್ತಿ ಹೋಗಿರುವದರಿಂದ ಮಹಾರಾಷ್ಟ್ರದಿಂದ ನಾಲ್ಕು ಟಿಎಂಸಿ ನೀರು ಹರಿಸುವಂತೆ ಹಾಗೂ ಕಾಗವಾಡಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಹಲವಾರು ಬಾರಿ ಪರಿಪರಿಯಾಗಿ ವಿನಂತಿಸಿಕೊಂಡರು ಮುಖ್ಯಮಂತ್ರಿಗಳು ಸ್ಪಂದಿಸಲಿಲ್ಲ.
ಇದರಿಂದ ಬೇಸತ್ತು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ತೊರೆಯುವ ನಿಧರ್ಾರ ಕೈಗೊಂಡು ಬಿಜೆಪಿ ಪಕ್ಷ ಪ್ರವೇಶಿಸಿದೆ ಎಂದು ಶ್ರೀಮಂತ ಪಾಟೀಲ ವಿವರಿಸಿದರು.
ಇಗೀನ ಜನಪ್ರೀಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಕಾಗವಾಡ ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು 200 ಕೋಟಿ ರೂ. ವಿಶೇಷ ಅನುದಾನವನ್ನು ನೀಡಿದ್ದಾರೆ.
ಕ್ಷೇತ್ರದಲ್ಲಿ ಕಾಮಗಾರಿಗಳು ಯುದ್ಯೋಪಾದಿಯಲ್ಲಿ ಜರುಗುತ್ತಿದ್ದು, ಕ್ಷೇತ್ರದ ಹೆಚ್ಚಿನ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯಥರ್ಿಯಾಗಿ ಸ್ಪಧರ್ಿಸಿರುವ ನನಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈ ಬಲ ಪಡಿಸುವಂತೆ ಕರೆ ನೀಡಿದರು. ಬಿಜೆಪಿ ಅಭ್ಯಥರ್ಿ ಶ್ರೀಮಂತ ಪಾಟೀಲರ ಜತೆ ಅನೇಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 