ಮಕ್ಕಳ ಭವಿಷ್ಯ ರೂಪಿಸುವ ಗುರುಗಳಿಗೆ ಅಪಾರ ಗೌರವ,- ಶಾಸಕ. ಕೃಷನಾಯಕ
I have immense respect for teachers who shape the future of children: MLA. Krishnanayak
ಹೂವಿನಹಡಗಲಿ 09 : ಭವಿಷ್ಯ ರೂಪಿಸುವ ಮಕ್ಕಳಲ್ಲಿ ನಿರಂತರ ಕಲಿಕೆ.ಕಾಳಜಿ ಗುರುಗಳಿಗೆ ಇದ್ದು ಅವರ ಮೇಲೆ ಅಪಾರ ಗೌರವ ಇದೆ ಎಂದು ಶಾಸಕ ಕೃಷ್ಣನಾಯಕ ಹೇಳಿದರು.ಪಟ್ಟಣದ ಡಾ.ಸರ್ವಪಲ್ಲಿ ರಾಧಾಕೃಷ್ಣ ರವರ 137ನೇ ಜನ್ಮದಿನ ಮತ್ತು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ತಾಲೂಕಿನಲ್ಲಿ ಇನ್ನೂ ಎರಡು ವರ್ಷಗಳ ಲ್ಲಿ ಶಾಲೆ ಮತ್ತು ಕಾಲೇಜು ಗಳ ದುರಸ್ತಿ.ಅಭಿವೃದ್ಧಿ ಮಾಡುವುದಾಗಿ ಹೇಳಿದ ಅವರು ಗುರುಭವನ ಕಾಮಗಾರಿಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದರು.
ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಮಾತನಾಡಿದರು. ಪ್ರಥಮಿಕ ಶಿಕ್ಷಕರ ಸಂಘದ ಅದ್ಯಕ್ಷ ವಿ.ಬಿ.ಜಗದೀಶ್ ಮಾತನಾಡಿ ಕಳೆದ 5ವರ್ಷಗಳಿಂದ ಬಡ್ತಿ ಮಾಡಿಲ್ಲ ಮತ್ತು ಹೆಚ್ಚುವರಿ ಶಿಕ್ಷಕರನ್ನು ಬೇರೆಡೆ ವರ್ಗಾವಣೆ ಮಾಡಬೇಕು ಎಂದರು. ಶಿಕ್ಷಕರ ಪರವಾಗಿ ಶಾಸಕರಿಗೆ ಬೇಡಿಕೆಯ ಮನವಿ ಸಲ್ಲಿಸಿದರು. ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ. ತಹಶಿಲ್ದಾರರ ಸಂತೋಷ ಕುಮಾರ. ಪುರಸಭೆ ಅದ್ಯಕ್ಷೆ ಗಂಟಿ ಜಮಾಲಾಬೀ . ಉಪಾಧ್ಯಕ್ಷ ಸೊಪ್ಪಿನ ಮಂಜುನಾಥ.ಸದಸ್ಯ ಮಂಜುನಾಥ ಜೈನ್. ಮುಖಂಡರಾದ ವಾರದಗೌಸ ಮೊಹಿದ್ದೀನ್.ಕೆ.ಮುದಕಪ್ಪ.ಹೆಚ್.ಪೂಜಪ್ಪ.ಕೋಟೆಪ್ಪ. ಶಿವರಾಜ .ವಿನಾಯಕ ಕೆ. ತಾ.ಪಂ.ಇಒ ಜಿ. ಪರಮೇಶಪ್ಪ . ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಎ.ಕೊಟ್ರಗೌಡ. ಮತ್ತು ಶಿಕ್ಷಕರ ಸಂಘದ ನಾನಾ ಅದ್ಯಕ್ಷ ರುಗಳು ಇದ್ದರು. ಶಿಕ್ಷಕರ ದಿನಾಚರಣೆ ನಿಮಿತ್ತ ರಕ್ತದಾನ ಶಿಬಿರ ಮತ್ತುನಿವೃತ್ತ. ಶಿಕ್ಷಕರನ್ನು ಸನ್ಮಾನಿಸಲಾಯಿತು ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಸ್ವಾಗತಿಸಿದರು.ಬಿಇಒಮಹೇಶ ಪೂಜಾರ ಪ್ರಾಸ್ತಾವಿಕ ಮಾತನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 