2014 ರಲ್ಲಿ ನನ್ನ ಕ್ರಿಕೆಟ್ ವೃತ್ತಿ ಜೀವನ ಮುಗಿಯಿತು ಅಂದುಕೊಂಡಿದ್ದೆ : ಕೊಹ್ಲಿ
ಇಂದೋರ್, ನ 14 : ಮಾನಸಿಕ ತೊಂದರೆ ಅನುಭವಿಸುತ್ತಿರುವ ಆಸ್ಟ್ರೇಲಿಯಾದ ಆಲ್ರೌಂಡರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಕ್ರಿಕೆಟ್ನಿಂದ ಅನಿರ್ದಿಷ್ಟಾವಧಿ ಅವಧಿಯ ವರೆಗೆ ವಿರಾಮವನ್ನು ತೆಗೆದುಕೊಂಡಿದ್ದಾರೆ.
ಇದನ್ನು ಸ್ವಾಗತಿಸಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, 2014ರಲ್ಲಿ ಸ್ವತ: ತಮಗೆ ಎದುರಾಗಿರುವ ಮಾನಸಿಕ ಖಿನ್ನತೆ ಸಮಸ್ಯೆಯ ಬಗ್ಗೆ ವಿವರಣೆಯನ್ನು ನೀಡಿದ್ದಾರೆ.
2014ರ ಇಂಗ್ಲೆಂಡ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಆಡಿರುವ 10 ಇನ್ನಿಂಗ್ಸ್ಗಳಲ್ಲಿ ಕೇವಲ 134 ರನ್ ಮಾತ್ರ ಗಳಿಸಿದ್ದರು. ಈ ಮೂಲಕ ಸತತ ವೈಫಲ್ಯಕ್ಕೊಳಗಾಗಿದ್ದರು.
ನನ್ನ ವೃತ್ತಿ ಜೀವನದ ಒಂದು ಹಂತದಲ್ಲಿ ಜಗತ್ತೇ ಅಂತ್ಯವಾಗಿದೆ ಎಂದು ಭಾವಿಸಿದ್ದೆ. 2014ರ ಇಂಗ್ಲೆಂಡ್ ಪ್ರವಾಸದ ಬಳಿಕ ಏನು ಮಾಡಬೇಕೆಂದು ತೋಚುತ್ತಿರಲಿಲ್ಲ. ಯಾರಿಗಾದರೂ ಏನನ್ನು ಹೇಳಲಿ, ಹೇಗೆ ಮಾತನಾಡಬೇಕು, ಹೇಗೆ ಸಂವಹನ ಮಾಡಬೇಕು ಎಂಬುದು ತಿಳಿದಿರಲಿಲ್ಲ ಎಂದು ವಿವರಿಸಿದರು.
ಪ್ರಾಮಾಣಿಕವಾಗಿ ಹೇಳಬೇಕೆಂದರೆ ಮಾನಸಿಕವಾಗಿ ಉತ್ತಮ ಪರಿಸ್ಥಿತಿಯಲ್ಲಿರಲಿಲ್ಲ. ಪಂದ್ಯದಿಂದ ದೂರವಿರಲು ಬಯಸಿದ್ದೆ ಎಂದು ಕ್ಯಾಪ್ಟನ್ ಕೊಹ್ಲಿ ಸೇರಿಸಿದರು.
ಇಷ್ಟಾದರೂ ವಿರಾಮ ಪಡೆದುಕೊಳ್ಳಬೇಕೇ ಎಂಬ ಬಗ್ಗೆಯೂ ತಮ್ಮಲ್ಲಿ ಖಚಿತತೆ ಇರಲಿಲ್ಲ ಎಂದು ಕ್ಯಾಪ್ಟನ್ ಕೊಹ್ಲಿ ವಿವರಿಸಿದರು.
ನನಗನಿಸುತ್ತದೆ ಇಂತಹ ಅಂಶಗಳು ಹೆಚ್ಚು ಪ್ರಾಮುಖ್ಯತೆಯನ್ನು ಗಿಟ್ಟಿಸಿಕೊಳ್ಳುತ್ತದೆ. ಒಬ್ಬ ಆಟಗಾರ ಮುಖ್ಯ ಎನಿಸಿದರೆ ಆತನತ್ತ ಭಾರತೀಯ ಕ್ರಿಕೆಟ್ ಹೆಚ್ಚಿನ ಗಮನ ಹರಿಸಬೇಕು ಎಂದು ವಿರಾಟ್ ಸೇರಿಸಿದರು.
ನಿಮಗೊಂದು ಕರ್ತವ್ಯವಿರುತ್ತದೆ. ಪ್ರತಿಯೊಬ್ಬರು ಅದರಲ್ಲಿ ಗಮನ ಕೇಂದ್ರಿತರಾಗಿರುತ್ತಾರೆ. ಆದರೆ ಇನ್ನೊಬ್ಬರ ಮನದಲ್ಲಿ ಏನಿದೆ ಎಂಬುದನ್ನು ಅರಿತುಕೊಳ್ಳುವುದು ಕಷ್ಟಕರ ಎಂದರು.
ನ್ ಮ್ಯಾಕ್ಸ್ವೆಲ್ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಮೂಲಕ ವಿಶ್ವ ಕ್ರಿಕೆಟಿಗರಿಗೆ ಮಾದರಿಯಾಗಿದ್ದಾರೆ. ನೀವು ಉತ್ತಮ ಮನೋಭಾವದ ಚೌಕಟ್ಟಿನಲ್ಲಿಲ್ಲದಿದ್ದರೆ, ನೀವು ಪದೇ ಪದೇ ಪ್ರಯತ್ನಿಸುತ್ತೀರಿ. ಆದರೆ ಕೆಲವು ಹಂತದಲ್ಲಿ ತುತ್ತ ತುದಿಯನ್ನು ತಲುಪುತ್ತೇವೆ. ಹಾಗಾಗಿ ಹೆಚ್ಚಿನ ಸಮಯದ ಅಗತ್ಯವಿರುತ್ತದೆ ಎಂದರು.
ಕ್ರಿಕೆಟ್ ಮೀರಿ ಜೀವನಮೊಂದಿದೆ. ಪ್ರತಿಯೊಬ್ಬರು ತಮ್ಮ ವೃತ್ತಿ ಜೀವನದಲ್ಲಿ ಏಳು ಬೀಳುಗಳನ್ನು ಅನುಭವಿಸುತ್ತಾರೆ. ಹೇಗಾದರೂ, ಅವುಗಳನ್ನು ಗುರುತಿಸಿ ತ್ವರಿತವಾಗಿ ಪರಿಹರಿಸುವುದು ಅಗತ್ಯವೆನಿಸಿದೆ ಎಂದು ವಿರಾಟ್ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 