ಸಮಾಜದ ಅಭಿವೃದ್ಧಿಗೆ ಶ್ರಮಿಸುವೆ: ಶಿವಾನಂದ ಹುನ್ನೂರ
I will work for the development of society: Shivananda Hunnur
ಸಮಾಜದ ಅಭಿವೃದ್ಧಿಗೆ ಶ್ರಮಿಸುವೆ: ಶಿವಾನಂದ ಹುನ್ನೂರ
ಮಹಾಲಿಂಗಪುರ 25: ಹಡಪದ ಅಪ್ಪಣ್ಣ ಸಮಾಜದ ಏಳಿಗೆ ಮತ್ತು ಸಂಘಟನೆ ಗಟ್ಟಿಗೊಳಿಸುವುದು ಅಷ್ಟೇ ಅಲ್ಲದೆ ಬೆಳಗಾವಿ ಜಿಲ್ಲೆಯ ಜೊತೆಗೆ ರಾಜ್ಯದ ತುಂಬಾ ಪ್ರವಾಸ ಮಾಡಿ ಸಮಾಜದ ಕುಂದು-ಕೊರತೆ ಕಂಡು ಹಿಡಿದು ಸಮಾಜದ ಸಲುವಾಗಿ ಹಗಲಿರುಳು ದುಡಿಯುವೆ ಎಂದು ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷ ಶಿವಾನಂದ ಹುನ್ನೂರ ಹೇಳಿದರು.
ರಬಕವಿ ನಗರದ ಪ್ರವಾಸಿ ರಂಗಮಂದಿರದಲ್ಲಿ ನೂತನ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಂತರ ಭಾರತೀಯ ಏರ್ ಫೋರ್ಸ್ ಗ್ರೇಡ್-1 ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಶ ನಾವಿ ಅವರನ್ನು ಸನ್ಮಾನಿಸಲಾಯಿತು.
ಹಡಪದ ಅಪ್ಪಣ್ಣ ಸಮಾಜ ಮುಖಂಡರಾದ ಬುದ್ಧಪ್ಪ ಕುಂದಗೋಳ, ಚಂದ್ರಶೇಖರ ಮಾಚಕನೂರ, ವಿನೋದ ಜಾಧವ, ಮಲ್ಲಪ್ಪ ನಾವಿ, ಅಶೋಕ ಹುನ್ನೂರು, ಶಂಕರ ಹಿಪ್ಪರಗಿ, ಶಿವಾನಂದ ನಾವಿ, ಮಹಾಂತೇಶ ಹಡಪದ, ಲಕ್ಕಪ್ಪ ನಾವಿ, ವಿಠ್ಠಲ ನಾವಿ, ಹಣಮಂತ ಉಮರಾಣಿ, ಮುತ್ತಪ್ಪ ಹಿಪ್ಪರಗಿ, ಬಸವರಾಜ ಹಾಲಹಳ್ಳಿ, ಜ್ಯೋತಿಬಾ ಜಾಧವ ಸೇರಿದಂತೆ ಅನೇಕರಿದ್ದರು. ಪತ್ರಕರ್ತ ಹಣಮಂತ ನಾವಿ ನಿರೂಪಿಸಿ, ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 