ಐಐಟಿಗಳು ಪರಿವರ್ತನೆಯ ಸಾಧನಗಳು: ಪ್ರಧಾನಿ
ಮುಂಬೈ: ಐಐಟಿ ಬಾಂಬೆಗೆ 1 ಸಾವಿರ ಕೋಟಿ ರುಪಾಯಿ ನೆರವು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಐಐಟಿಗಳು ತಂತ್ರಜ್ಞಾನ ಸಂಸ್ಥೆಗಳು ಮಾತ್ರವಲ್ಲ. ಅವು ಭಾರತದ ಪರಿವರ್ತನೆಯ ಸಾಧನಗಳು ಎಂದು ಶನಿವಾರ ಹೇಳಿದ್ದಾರೆ.
ಇಂದು ಐಐಟಿ ಬಾಂಬೆಯ 56ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ, ಹೊಸ ಹೊಸ ಆವಿಷ್ಕಾರಗಳು ಮತ್ತು ಉದ್ಯಮಶೀಲತೆ ಭಾರತ ಆಥರ್ಿಕ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ನಿಮರ್ಿಸಲು ಅಡಿಪಾಯವಾಗುತ್ತಿವೆ ಎಂದರು.
ನಿಮ್ಮ ಮುಖದಲ್ಲಿರುವ ವಿಶ್ವಾಸ ನೋಡಿದರೆ ನಾವು ಸರಿಯಾದ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬುದು ಸ್ಪಷ್ಟವಾಗುತ್ತದೆ. ಉತ್ತಮ ಯೋಚನೆಗಳು ಸಕರ್ಾರಿ ಕಟ್ಟಡಗಳಲ್ಲಿ ಅಥವಾ ಅಲಂಕಾರಿಕ ಕಚೇರಿಗಳಲ್ಲಿ ಹುಟ್ಟುವುದಿಲ್ಲ. ಉತ್ತಮ ಯೋಚನೆಗಳು ಐಐಟಿ ಬಾಂಬೆಯಂತಹ ಕ್ಯಾಂಪಸ್ ಗಳಲ್ಲಿ ಹುಟ್ಟುತ್ತವೆ ಎಂದು ಪ್ರಧಾನಿ ಹೇಳಿದ್ದಾರೆ.
ಹೊಸ ಹೊಸ ಆವಿಷ್ಕಾರಗಳು ನಡೆಯದೇ ಇದ್ದರೆ ಸಮಾಜ ಅಭಿವೃದ್ಧಿಯಾಗುವುದಿಲ್ಲ. ಭಾರತ ಈಗ ಸ್ಟಾಟರ್್ ಅಪ್ ಗಳ ತಾಣವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಹೊಸ ಆವಿಷ್ಕಾರಗಳ ತುಡಿತ ಕಾಣಿಸುತ್ತಿದೆ ಎಂದರು.
ಇದೇ ವೇಳೆ ಹವಾಮಾನ ವೈಪರೀತ್ಯವನ್ನು ನಿಯಂತ್ರಿಸುವ, ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ, ಸ್ವಚ್ಛವಾದ ಗಾಳಿ, ನೀರಿನ ಸಂರಕ್ಷಣೆ, ಅಪೌಷ್ಠಿಕತೆ ಮತ್ತು ತ್ಯಾಜ್ಯ ಸಂಸ್ಕರಣೆ ಬಗ್ಗೆ ಹೊಸ ಹೊಸ ಆವಿಷ್ಕಾರಗಳನ್ನು ನಡೆಸಬೇಕು ಎಂದು ಐಐಟಿ ವಿದ್ಯಾಥರ್ಿಗಳಿಗೆ ಪ್ರಧಾನಿ ಕರೆ ನೀಡಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 