ಐಐಟಿಗಳು ಪರಿವರ್ತನೆಯ ಸಾಧನಗಳು: ಪ್ರಧಾನಿ
ಮುಂಬೈ: ಐಐಟಿ ಬಾಂಬೆಗೆ 1 ಸಾವಿರ ಕೋಟಿ ರುಪಾಯಿ ನೆರವು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಐಐಟಿಗಳು ತಂತ್ರಜ್ಞಾನ ಸಂಸ್ಥೆಗಳು ಮಾತ್ರವಲ್ಲ. ಅವು ಭಾರತದ ಪರಿವರ್ತನೆಯ ಸಾಧನಗಳು ಎಂದು ಶನಿವಾರ ಹೇಳಿದ್ದಾರೆ.
ಇಂದು ಐಐಟಿ ಬಾಂಬೆಯ 56ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ, ಹೊಸ ಹೊಸ ಆವಿಷ್ಕಾರಗಳು ಮತ್ತು ಉದ್ಯಮಶೀಲತೆ ಭಾರತ ಆಥರ್ಿಕ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ನಿಮರ್ಿಸಲು ಅಡಿಪಾಯವಾಗುತ್ತಿವೆ ಎಂದರು.
ನಿಮ್ಮ ಮುಖದಲ್ಲಿರುವ ವಿಶ್ವಾಸ ನೋಡಿದರೆ ನಾವು ಸರಿಯಾದ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬುದು ಸ್ಪಷ್ಟವಾಗುತ್ತದೆ. ಉತ್ತಮ ಯೋಚನೆಗಳು ಸಕರ್ಾರಿ ಕಟ್ಟಡಗಳಲ್ಲಿ ಅಥವಾ ಅಲಂಕಾರಿಕ ಕಚೇರಿಗಳಲ್ಲಿ ಹುಟ್ಟುವುದಿಲ್ಲ. ಉತ್ತಮ ಯೋಚನೆಗಳು ಐಐಟಿ ಬಾಂಬೆಯಂತಹ ಕ್ಯಾಂಪಸ್ ಗಳಲ್ಲಿ ಹುಟ್ಟುತ್ತವೆ ಎಂದು ಪ್ರಧಾನಿ ಹೇಳಿದ್ದಾರೆ.
ಹೊಸ ಹೊಸ ಆವಿಷ್ಕಾರಗಳು ನಡೆಯದೇ ಇದ್ದರೆ ಸಮಾಜ ಅಭಿವೃದ್ಧಿಯಾಗುವುದಿಲ್ಲ. ಭಾರತ ಈಗ ಸ್ಟಾಟರ್್ ಅಪ್ ಗಳ ತಾಣವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಹೊಸ ಆವಿಷ್ಕಾರಗಳ ತುಡಿತ ಕಾಣಿಸುತ್ತಿದೆ ಎಂದರು.
ಇದೇ ವೇಳೆ ಹವಾಮಾನ ವೈಪರೀತ್ಯವನ್ನು ನಿಯಂತ್ರಿಸುವ, ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ, ಸ್ವಚ್ಛವಾದ ಗಾಳಿ, ನೀರಿನ ಸಂರಕ್ಷಣೆ, ಅಪೌಷ್ಠಿಕತೆ ಮತ್ತು ತ್ಯಾಜ್ಯ ಸಂಸ್ಕರಣೆ ಬಗ್ಗೆ ಹೊಸ ಹೊಸ ಆವಿಷ್ಕಾರಗಳನ್ನು ನಡೆಸಬೇಕು ಎಂದು ಐಐಟಿ ವಿದ್ಯಾಥರ್ಿಗಳಿಗೆ ಪ್ರಧಾನಿ ಕರೆ ನೀಡಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 