ಜಾಗತಿಕ ತಾಪಮಾನ ಏರಿಕೆ, ಭವಿಷ್ಯದಲ್ಲಿ ತಂದೊಡ್ಡಲಿದೆ ಭಾರಿ ಸಂಕಷ್ಟ ..!!
ನವದೆಹಲಿ, ಫೆ 14, ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದು ದೇಶದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಅದರಲ್ಲಿಯೂ ಕರಾವಳಿ ಭಾಗದಲ್ಲಿ ಗರಿಷ್ಠ ತಾಪಮಾನ 4 ಡಿಗ್ರಿ ಹೆಚ್ಚಳವಾದರೆ ಸಮುದ್ರದ ಮಟ್ಟ ಏರಿಕೆಯಾಗಿ ಕರಾವಳಿ ಪಟ್ಟಣಗಳು ಅಪೋಶನಕ್ಕೆ ಒಳಗಾಗಿ 5 ಕೋಟಿಗೂ ಹೆಚ್ಚಿನ ಜನರು ಶಾಶ್ವತವಾಗಿ ನೆಲೆ ಕಳೆದುಕೊಳ್ಳಲಿದ್ದಾರೆ. ಇದು ಭವಿಷ್ಯ ಭಾರಿ ಅನಾಹುತ ಮತ್ತು ವಿಪ್ಲವಗಳಿಗೂ ಕಾರಣವಾಗಲಿದೆ ಎಂಬ ಆತಂಕಕಾರಿ ಅಂಶ ಫ್ಯೂಚರ್ ಅರ್ತ್ ಸಂಸ್ಥೆಯ ವರದಿಯಲ್ಲಿ ಬಹಿರಂಗವಾಗಿದೆ. ಹೆಚ್ಚುತ್ತಿರುವ ತಾಪಮಾನವು ಕೃಷಿ ಕ್ಷೇತ್ರದ ಮೇಲೆಯೂ ಬಹಳ ಕೆಟ್ಟ ಪರಿಣಾಮ ಬೀರಲಿದ್ದು, ಇದು ತೀವ್ರ ಜಲ ಮತ್ತು ಆಹಾರ ಬಿಕ್ಕಟ್ಟಿಗೂ ಕಾರಣವಾಗಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.ಫ್ಯೂಚರ್ ಅರ್ತ್ ಸಂಸ್ಥೆಯ ನೇತೃತ್ವದಲ್ಲಿ 52 ದೇಶಗಳ 200 ಕಕ್ಉ ಹೆಚ್ಚು ಪರಿಣಿತ ವಿಜ್ಞಾನಿಗಳ ತಂಡ ಸಿದ್ಧಪಡಿಸಿದ್ದ 'ಭೂಮಿಯ ಮೇಲೆ ನಮ್ಮ ಭವಿಷ್ಯ' ಎಂಬ ಸಂಶೋಧನಾ ವರದಿಯನ್ನು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ. ಜಗತ್ತಿನಲ್ಲಿ ಪ್ರತಿ ವರ್ಷ 30 ಕೋಟಿ ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಅಷ್ಟೇ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯವೂ ಸಮುದ್ರ ಸೇರುತ್ತಿದೆ ಎಂಬ ಆಘಾತಕಾರಿ ಅಂಶ ಸಹ ವರದಿಯಲ್ಲಿ ಉಲ್ಲೇಖವಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 