ಜಮ್ಮುವಿನಲ್ಲಿ ಮುಂದುವರಿದ ಅಂತರ್ಜಾಲ ಸೇವೆ ಸ್ಥಗಿತ
ಶ್ರೀನಗರ, ಫೆ 15, ಜಮ್ಮು ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿ ಆರು ತಿಂಗಳು ಕಳೆದಿದ್ದರೂ, ವೇಗದ ಅಂತರ್ಜಾಲ ಮತ್ತು ಬ್ರಾಡ್ ಬ್ಯಾಂಡ್ ಸೇವೆಯನ್ನು ಸ್ಥಗಿತ ಮುಂದುವರಿದಿದೆ. ಇತ್ತೀಚೆಗೆ ಶ್ರೀನಗರಕ್ಕೆ ಭೇಟಿ ನೀಡಿದ್ದ ವಿದೇಶಿ ಪ್ರತಿನಿಧಿಗಳ ಎರಡನೇ ನಿಯೋಗ ಕೂಡ, ಕಣಿವೆಯಲ್ಲಿ ಅಂತರ್ಜಾಲ ಸೇವೆಯನ್ನು ಪುನಾರಂಭಿಸಬೇಕು ಎಂಬ ಸಲಹೆ ನೀಡಿತ್ತು. ಸದ್ಯ ಕಣಿವೆಯಲ್ಲಿ ಲಭ್ಯವಿರುವ 2 ಜಿ ಅಂತರ್ಜಾಲ ಸೇವೆಯಿಂದ ಇ-ಮೇಲ್ ಗಳನ್ನು ಕೂಡ ಪರಿಶೀಲಿಸಲು ಕಷ್ಟವಾಗಿದೆ. 300 ಸರ್ಕಾರಿ ವೆಬ್ ಸೈಟ್ ಗಳನ್ನು ಹೊರತುಪಡಿಸಿ, ಎಲ್ಲಾ ಸಾಮಾಜಿಕ ಜಾಲತಾಣಗಳ ಸೈಟ್ ಗಳ ಬಳಕೆಯ ಮೇಲೆ ನಿರ್ಬಂಧ ಹೇರಲಾಗಿದೆ.
ಇದರಿಂದ ಮಾಧ್ಯಮ ಪ್ರತಿನಿಧಿಗಳು, ವೈದ್ಯರು, ವಿದ್ಯಾರ್ಥಿಗಳು ಮತ್ತು ಇತರ ವೃತ್ತಿಪರರು ಪರದಾಡುವಂತಾಗಿದೆ. 2018ರ ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನು ರಚಿಸಿತ್ತು. ಈ ಆದೇಶ ಹೊರಬಿದ್ದ ನಂತರ ಈ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ನಿಯೋಜಿಸಲಾಗಿದ್ದು, ಪ್ರತಿಭಟನೆ, ಘರ್ಷಣೆಗಳನ್ನು ತಡೆಯಲು ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 