ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ
Identify and fine those who litter in public places
ಲೋಕದರ್ಶನ ವರದಿ
ದಾಂಡೇಲಿ 18 : ದಾಂಡೇಲಿ ನಗರಸಭೆಯ ಪೌರಾಯುಕ್ತರಾದ ವಿವೇಕ್ ಬನ್ನೆಯವರು ಉದ್ದೇಶಪೂರ್ವಕವಾಗಿ ಕಸ ಎಸೆಯುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀರುವ ಹಿನ್ನೆಲೆಯಲ್ಲಿ ಆರೋಗ್ಯ ನೀರೀಕ್ಷಕರ ತಂಡ ಈಗ ಹದ್ದಿನ ಕಣ್ಣಿಟ್ಟು ಪರೀಶೀಲನೆ ನಡೆಸುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ ವಿಧಿಸುವ ಕಾರ್ಯ ಮುಂದುವರೆಯಲಿದೆ. ಎಂದು ತಿಳಿದು ಬಂದಿದೆ. ಈಗಾಗಲೇ ಎಚ್ಚರಿಕೆ ನೀಡಿದಾಗಲೂ ಕಸ ಎಸೆಯುತ್ತಿರುವವರಿಗೆ ನೋಟಿಸು ನೀಡಿ ದಂಡ ವಿಧಿಸಲಾಗಿದೆ. ಇದುವರೆಗೂ 7500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ದಂಡ ನೀಡಲು ನಿರಾಕರಿಸಿದ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಿಸಿರುವದಾಗಿ ಮಾಹಿತಿ ನೀಡಿದ್ದಾರೆ. ಬರಲಿರುವ ದಿನಗಳಲ್ಲಿ ಯಾವುದೇ ಮುಲಾಜಿಲ್ಲದೇ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಲಾಗಿದೆ..
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 