ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ: ಸಿಪಿಐ ರವಿ ಉಕ್ಕುಂದ
ಲೋಕದರ್ಶನ ವರದಿ
ಕೊಪ್ಪಳ 09: ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಬೇಕು ಎಂದು ಕೊಪ್ಪಳ ಗ್ರಾಮೀಣ ಪೋಲಿಸ್ ಠಾಣೆ ಸಿಪಿಐ ರವಿ ಉಕ್ಕುಂದ ಹೇಳಿದರು.
ತಾಲೂಕಿನ ಬೇವಿನಹಳ್ಳಿ ಗ್ರಾಮದ ಶ್ರೀಮಾತೋಶ್ರೀ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸಿದ ಶಾಲಾ ವಾಷರ್ಿಕೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಪ್ರತಿ ಮಗು ಕೂಡ ತನಗೆ ಸಿಗಬೇಕಾದ ಮೂಲಭೂತ ಶಿಕ್ಷಣದಿಂದ ವಂಚಿತಆಗಬಾರದು. ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು, ಮಕ್ಕಳ ಭವಿಷ್ಯ ಉಜ್ವಲಗೊಳ್ಳಲು ಶಿಕ್ಷಕರಷ್ಟೇ ಪಾಲಕರ ಜವಾಬ್ದಾರಿ ಇದೆ. ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಿಯಮಗಳನ್ನು ಪಾಲಿಸುವುದು ಕಡಿಮೆಯಾಗಿದೆ. ಎಲ್ಲಾರೂ ಟ್ರಾಫಿಕ್ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು ಎಂದರು.
ಶ್ರೀಮಾತೋಶ್ರೀ ಪ್ರಶಸ್ತಿ ಸ್ವೀಕರಿಸಿ ಸುರೇಶ ಕಂಬಳಿ ಮಾತನಾಡಿ, ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸುವದು ಸಾಮಾನ್ಯ ಕೆಲಸವಲ್ಲ, ಆದರೆ ಈ ಸಂಸ್ಥೆಯು ಸಹಕಾರಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ ಎಂದರು.
ಕಾರ್ಯಕ್ರಮದ ದಿವ್ಯಸಾನಿಧ್ಯ ಕನಕಗುರು ಪೀಠ ಹಾಲವರ್ತಿಯ ಶಾಖಾಮಠದ ಶ್ರೀ ಶಿವಸಿದ್ದೇಶ್ವರ ಮಹಾಸ್ವಾಮಿಗಳುವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಯಂಕನಗೌಡ ಪಾಟೀಲ್ ಅಧ್ಯಕ್ಷತೆವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಾ.ಪಂ.ಸದಸ್ಯ ಮೂತರ್ೆಪ್ಪ ಗುಳದಳ್ಳಿ, ಬೇವನಹಳ್ಳಿ ಗ್ರಾಮದ ಸುತ್ತಮುತ್ತಾ ಸಕರ್ಾರಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಯಮನೂರಪ್ಪ, ಶಿವಪುತ್ರಪ್ಪ, ಮಲ್ಲಿಕಾಜರ್ುನ್, ಅಶೋಕ, ವಿವೇಕಾನಂದ ಶಾಲೆಯ ರಮೇಶಹೊಳೆಯಾಚೆ, ದ್ಯಾಮಣ್ಣ ಅಬ್ಬಿಗೇರಿ, ಭೀಮಣ್ಣ ಮೂಲಿಮನಿ, ಗಿರೀಶ ಹಿರೇಮಠ, ಫಕೀರಪ್ಪ ಅಜ್ಜಿ, ರಾಘವೇಂದ್ರ, ಆಡಳಿತ ಮಂಡಳಿಯ ಶಿವಮೂತರ್ಿ, ನಾಗರಾಜ, ಮಾರುತಿ, ಷಣ್ಮುಖಪ್ಪ, ಗವಿಸಿದ್ದಪ್ಪ ಬೆಟಗೇರಿ ಸೇರಿದಂತೆ ಶಾಲಾ ಶಿಕ್ಷಕರು, ವಿದ್ಯಾಥರ್ಿಗಳು ಹಾಗೂ ಪಾಲಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರಿಗೆ ಸನ್ಮಾನಿಸಲಾಯಿತು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದ ವಾಷರ್ಿಕ ವರದಿಯನ್ನು ಮುಖ್ಯೋಫಾದ್ಯಯ ವೀರಯ್ಯ ಮೂಲಿಮಠ ವಾಚಿಸಿದರು. ಸಂಸ್ಥೆಯ ಅಧ್ಯಕ್ಷ ಮುದ್ದಪ್ಪ ಗೊಂದಿಹೊಸಳ್ಳಿ ಸ್ವಾಗತಿಸಿ ಹಾಗೂ ನಿರೂಪಿಸಿದರೆ, ದೇವರಾಜ ಮೇಟಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 