ಧೋನಿ ಫಿಟ್, ಲಯದಲ್ಲಿದ್ದರೆ ಅವರನ್ನು ವಿಶ್ವಕಪ್ ತಂಡದಿಂದ ಕಡೆಗಣಿಸುವಂತಿಲ್ಲ: ಜಾಫರ್
ನವದೆಹಲಿ, ಮಾ.19, ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಫಿಟ್ ಆಗಿದ್ದು ಲಯದಲ್ಲಿದ್ದರೆ ಅವರನ್ನು ಕಡೆ ಗಣಿಸಲು ಸಾಧ್ಯವೇ ಇಲ್ಲ ಎಂದು ಮಾಜಿ ಆರಂಭಿಕ ಆಟಗಾರ ವಾಸೀಮ್ ಜಾಫರ್ ತಿಳಿಸಿದ್ದಾರೆ. ಇತ್ತೀಚಿಗೆ ಜಾಫರ್ ಎಲ್ಲ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದರು. ಧೋನಿ ತಂಡ ಸೇರುವುದರಿಂದ ಕೆ.ಎಲ್ ರಾಹುಲ್ ಹಾಗೂ ರಿಷಭ್ ಪಂಥ್ ಅವರ ಮೇಲೆ ಒತ್ತಡ ಬೀಳಲಿದೆ ಎಂದಿದ್ದಾರೆ. “ಒಂದು ವೇಳೆ ಮಾಹಿ ಲಯದಲ್ಲಿದ್ದು, ದೈಹಿಕವಾಗಿ ಫಿಟ್ ಆಗಿದ್ದರೆ, ವಿಶ್ವಕಪ್ ತಂಡದಿಂದ ಅವರನ್ನು ಕೈ ಬಿಡುವ ಪ್ರಶ್ನೆ ಇಲ್ಲವೇ ಇಲ್ಲ. ಅವರು ವಿಕೆಟ್ ಹಿಂದೆ ತಂಡಕ್ಕೆ ಬಲ ತುಂಬ ಬಲ್ಲ ಆಟಗಾರ. ಧೋನಿ ತಂಡ ಸೇರಿದಾಗ, ಎಡಗೈ ಆಟಗಾರ ಎಂಬ ಕಾರಣದಿಂದ ಆಡಿಸುವುದಾದರೆ ಪಂತ್ ಅವರನ್ನು ಬ್ಯಾಟ್ಸ್ ಮನ್ ಆಗಿ ಆಡಿಸಬಹುದು” ಎಂದು ಜಾಫರ್ ತಿಳಿಸಿದ್ದಾರೆ.
ಮಹೇಂದ್ರ ಸಿಂಗ್ ಅವರು ಇಂಗ್ಲೆಂಡ್ ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಸೆಮಿಫೈನಲ್ಸ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಬ್ಲ್ಯೂ ಜೆರ್ಸಿ ತೊಟ್ಟಿಲ್ಲ. ಅಲ್ಲದೆ ಅವರು ಮುಂಬರುವ ಟಿ-20 ವಿಶ್ವಕಪ್ ನಲ್ಲಿ ಆಡಬೇಕಾ ಬೇಡವಾ ಎಂಬುದರ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿದ್ದು, ಈ ಎಲ್ಲ ಪ್ರಶ್ನೆಗಳಿಗೆ ಧೋನಿ ಬ್ಯಾಟ್ ಎಂಬ ಮಾಯಾ ದಂಡದ ಮೂಲಕವೇ ಉತ್ತರಿಸಬೇಕಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 