ಶ್ರೀಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತವಾದರೆ ತನಿಖೆ: ಸಿಎಂ ಎಚ್ಡಿಕೆ
ಬೆಂಗಳೂರು 19: ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅವಶ್ಯವೆಂದರೆ ತನಿಖೆ ಅನಿವಾರ್ಯ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಶ್ರೀಗಳ ಅಕಾಲಿಕ ನಿಧನ ಧಾಮರ್ಿಕ ಕ್ಷೇತ್ರದಲ್ಲಿ ಅಪಾರ ನಷ್ಟವನ್ನುಂಟುಮಾಡಿದೆ. ಅವರ ಸಾವಿನ ಬಗ್ಗೆ ಕೇಳಿಬರುತ್ತಿರುವ ಅನುಮಾನಗಳಿಗೆ ಅವಶ್ಯವೆಂದರೆ ತನಿಖೆ ಅನಿವಾರ್ಯ ಎಂದು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಶಿರೂರು ಶ್ರೀಗಳ ಆಕಸ್ಮಿಕ ಸಾವು ನೋವು ತಂದಿದೆ. ಅವರ ಸಾವಿನ ಸಂಶಯದ ಬಗ್ಗೆ ನಮಗೆ ಈವರೆಗೆ ಯಾವುದೇ ಸಕರ್ಾರದ ಮಟ್ಟದಲ್ಲಿ ಅಧಿಕೃತ ಮಾಹಿತಿ ಬಂದಿಲ್ಲ, ಬಂದರೆ ತನಿಖೆಗೆ ವಹಿಸುವ ಕುರಿತು ತೀಮರ್ಾನಿಸಲಾಗುವುದು ಎಂದರು.
ಉಡುಪಿಯ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ದೈವಾಧೀನರಾಗಿರುವುದು ಮನಸ್ಸಿಗೆ ಅತೀವ ನೋವು ತಂದಿದೆ. ಜನರ ಜೊತೆ ಸಾಮಾನ್ಯರಂತೆ ಬೆರೆಯುತ್ತಿದ್ದ ಹಾಗೂ ಶ್ರೀಕೃಷ್ಣನ ಸೇವೆಯಲ್ಲಿ ಅಪಾರ ಶ್ರದ್ಧೆ ಹೊಂದಿದ್ದ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾಥರ್ಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಸಹ ಸಂತಾಪ ಸೂಚಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 