ಒಂದು ಜೆಎನ್ ಯು ಹತ್ತಿಕ್ಕಿದರೆ ನೂರು ಜೆ ಎನ್ ಯು ಸಿಡಿದೇಳುತ್ತವೆ: ಸಸಿಕಾಂತ್ ಸೆಂಥಿಲ್
ಕಲಬುರ್ಗಿ, ಜ 7 , ಕೇಂದ್ರ ಸರ್ಕಾರ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯವನ್ನು ಹತ್ತಿಕ್ಕಲು ಹೊರಟಿದೆ ಎಂದು ಆರೋಪಿಸಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್, ಇದೇ ಪರಿಪಾಠ ಮುಂದುವರಿದಲ್ಲಿ ನೂರು ವಿ.ವಿ.ಗಳ ವಿದ್ಯಾರ್ಥಿಗಳು ಸಿಡಿದೇಳುತ್ತಾರೆ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಜನಗಳೇ ಸ್ವಯಂ ಪ್ರೇರಿತರಾಗಿ ಬೀದಿಗಿಳಿದಿದ್ದಾರೆ. ಇದರಿಂದ ಹತಾಶವಾದ ಕೇಂದ್ರ ಸರ್ಕಾರ ಬುಲೆಟ್ಟಿನ ಮೂಲಕ ತಡೆಯಲು ಹೊರಟಿದೆ. ಇದು ಅಪಾಯಕಾರಿಯಾದುದು. ಎಲ್ಲರೂ ಇದರ ವಿರುದ್ಧ ಹೋರಾಟ ನಡೆಸಬೇಕಿದೆ ಎಂದರು.
ರಾಷ್ಟ್ರೀಯ ಪೌರತ್ವ ನೋಂದಣಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲ್ಲೆಯಲ್ಲಿ ಜನರ ದಿಕ್ಕು ತಪ್ಪಿಸಲು ಸರ್ಕಾರ ಎನ್ ಆರ್ ಸಿ ಬದಲು ಎನ್ ಪಿ ಆರ್ ಜಾರಿಗೆ ತಂದಿದೆ. ಇದನ್ನು ಗೃಹ ಇಲಾಖೆ ಮೇಲ್ವಿಚಾರಣೆಯಲ್ಲಿ ನಡೆಸುತ್ತಿದೆ. ಸಿಎಎಯಿಂದ ಯಾರ ಪೌರತ್ವವನ್ನು ಕಸಿಯುವ ಉದ್ದೇಶವಿಲ್ಲ ಎಂಬುದು ಹಸಿ ಸುಳ್ಳು. ಇದರಿಂದ ಮುಸ್ಲಿಮರಷ್ಟೇ ಅಲ್ಲ ಎಲ್ಲರೂ ಪೌರತ್ವವನ್ನು ಸಾಬೀತುಪಡಿಸಬೇಕಾಗುತ್ತದೆ. ನಿರುದ್ಯೋಗ, ಆರ್ಥಿಕ ಹಿಂಜರಿತದಂತಹ ಸಮಸ್ಯೆಗಳು ದೇಶವನ್ನು ಕಾಡುತ್ತಿರುವುದು ಈ ಪ್ರಕ್ರಿಯೆ ಅನಿವಾರ್ಯವಿದೆಯೇ ಎಂದು ಪ್ರಶ್ನಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 