ಜಾನುವಾರುಗಳು ರೋಗಕ್ಕೀಡಾದರೆ-ಕಾಣೆಯಾದರೆ ತಕ್ಷಣ ಮಾಹಿತಿ ಲಭ್ಯವಾಗುವ ಚಿಪ್ ಅಳವಡಿ
ಯಲ್ಲಾಪುರ 24: ರೈತರಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಎಲ್ಲ ಜಾನುವಾರುಗಳ ಕಿವಿಗೆ
ಚಿಪ್ ಅಳವಡಿಸಲಾಗುತ್ತಿದ್ದು, ಇದರಿಂದ ಯಾವುದೇ ಜಾನುವಾರುಗಳು ರೋಗಕ್ಕೀಡಾದರೆ ಅಥವಾ ಕಾಣೆಯಾದರೆ ತಕ್ಷಣ
ಮಾಹಿತಿ ಲಭ್ಯವಾಗುತ್ತದೆ. ಅಲ್ಲದೇ, ಅಕಾಲಿಕ ಮರಣವನ್ನಪ್ಪಿದರೆ ಸಕರ್ಾರದ ವಿಮೆ ಪಡೆಯಲು ಅನುಕೂಲವಾಗುತ್ತದೆ.
ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸಚಿವ ವೆಂಕಟರಾವ್ ನಾಡಗೌಡ
ಹೇಳಿದರು.
ಅವರು ಪಟ್ಟಣದ
ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ. 'ಜಿಲ್ಲೆಯಲ್ಲಿ 230 ಫಲಾನುಭವಿಗಳಿಗೆ ವಿಮೆ ಸೌಲಭ್ಯ ದೊರೆತಿಲ್ಲ
ಎನ್ನುವುದು ನನ್ನ ಗಮನಕ್ಕೆ ಬಂದಿದೆ.
ಈ ಕುರಿತಾಗಿಯೂ ತಕ್ಷಣ ಗಮನ ಹರಿಸಲಾಗುವದು ಎಂದರು.
ಜಾನುವಾರುಗಳ ಕಿವಿಗೆ ಚಿಪ್ ಅಳವಡಿಸುವ ಕಾರ್ಯ
ಜಿಲ್ಲೆಯಲ್ಲಿ ಶೇ 60ರಷ್ಟು ಮಾತ್ರ
ಕಾರ್ಯಗತವಾಗಿದೆ.
ಆದ್ದರಿಂದ ಇಂಥ ಉಪಯುಕ್ತ ಯೋಜನೆಯನ್ನು
ಎಲ್ಲ ಪ್ರದೇಶಗಳ ಹೈನುಗಾರರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ತ್ವರಿತ ಗಮನ ಹರಿಸಬೇಕು ಎಂದರು.ರಾಜ್ಯದಲ್ಲಿ 600 ಪಶುವೈದ್ಯರ ಹುದ್ದೆ ಖಾಲಿ ಇದ್ದು, ಇನ್ನು
2 ತಿಂಗಳ ಒಳಗೆ ಈ ಕುರಿತು
ನೂತನ ವೈದ್ಯರ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು. ಕೇವಲ 31 ಪಶುವೈದ್ಯರು ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯಲ್ಲಿ ಖಾಲಿ ಇರುವ 114 ಹುದ್ದೆಗಳನ್ನೂ
ಶೀಘ್ರವಾಗಿ ಭತರ್ಿ ಮಾಡಲಾಗುವುದು ಎಂದು ಅವರು ಭರವಸೆ
ನೀಡಿದರು.ಇದೇ ಸಂದರ್ಭದಲ್ಲಿ ಸಚಿವ
ವೆಂಕಟರಾವ್ ನಾಡಗೌಡರನ್ನು ಶಾಸಕ
ಶಿವರಾಮ ಹೆಬ್ಬಾರ ಗೌರವಿಸಿದರು.
ಕೆಪಿಸಿಸಿ ಸದಸ್ಯ ವಿಜಯ ಮಿರಾಶಿ, ತಾ. ಪಂ. ಅಧ್ಯಕ್ಷೆ ಭವ್ಯಾ ಶೆಟ್ಟಿ, ಪಶು ಸಂಗೋಪನಾ ಇಲಾಖೆಯ ಜಿಲ್ಲಾ ಉಪನಿದರ್ೇಶಕ ಡಾ.ಸುಬ್ರಾಯ ಭಟ್ಟ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ, ನಾಗರಾಜ ನಾಯ್ಕ, ಅಮಿತ ಅಂಗಡಿ, ಶ್ರೀಧರ ಶೆಟ್ಟಿ, ಕಿರಣ ಗಾಂವ್ಕರ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 