ಕಲಾವಿದರು ಒಗ್ಗಟಾಗಿ ನಿಂತರೆ ಚಿತ್ರೋದ್ಯಮ ಉಳಿಯಲಿದೆ: ನಟ ಜಗ್ಗೇಶ್
ಬೆಂಗಳೂರು, ಮೇ18,ಸಿನಿಮಾಗಾಗಿಯೇ ಬಾಳಿ ಬದುಕಿದ ಹಿರಿಯ , ಕಿರಿಯರು ಪರಸ್ಪರ ಒಗ್ಗಟ್ಟಾದರೇ ಮಾತ್ರ ಚಿತ್ರೋದ್ಯಮ ಉಳಿಯಲು ಸಾಧ್ಯ ಎಂದು ನವರಸ ನಾಯಕ ಜಗ್ಗೇಶ್ ಅಭಿಪ್ರಾಯ ಪಟ್ಟಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಪರಭಾಷೆ ನಿರ್ಮಾಪಕರು ನಿರ್ದೇಶಕರಿಗೆ ಬಿಲ್ಡ್ ಅಪ್ ಕೊಟ್ಟು ಕರ್ನಾಟಕ ಎಂದರೆ ಇಷ್ಟೇ ಜನ ಎಂದು ಮುದ್ರೆ ಹಾಕಿ ಡಬ್ಬಿಂಗ್ ಸಿನಿಮಾ, ಡಬ್ಬಿಂಗ್ ರೈಟ್ಸ್, ಪಡೆದು ಕೆಲವರು ಬಲಿಷ್ಟರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಅಂತವರ ಕಪಿಮುಷ್ಟಿಯಿಂದ ಉದ್ಯಮ ಹೊರಬಂದರೆ! ಹೊಸ ನಿರ್ಮಾಪಕರು ನಿರ್ದೇಶಕರು, ನಟ, ನಟಿಯರು ಬೆಳೆದು ಕನ್ನಡ ಚಿತ್ರರಂಗದ ಮುಂದಿನ ಆಸ್ತಿಯಾಗಲಿದ್ದಾರೆ ಎಂದರು. ಕಲಾಭಿಮಾನಿಗಳ ಚಪ್ಪಾಳೆ ನಟ-ನಟಿ ಯನ್ನು ಶ್ರೀಮಂತರನ್ನಾಗಿ ಮಾಡುತ್ತದೆ. ಹೀಗಾಗಿ ಕಲಾವಿದರನ್ನು ಬೆಳೆಸಿದ ನಿರ್ಮಾಪಕರು ಟಿವಿ ಮುಂದೆ,ಒಂಟಿ ಭೀಕ್ಷುಕನನ್ನಾಗಿ ಮಾಡಬೇಡಿ ಎಂದರು. ಈಗ ಹಿರಿಯರೆಲ್ಲರೂ ಒಂದಾಗದಿದ್ದರೇ, ಪರ ಭಾಷೆಯ ಚಿತ್ರಗಳು ರಾಜನಂತೆ ರಾಜ್ಯವನ್ನು ಆಕ್ರಮಿಸಿ, ನಮ್ಮ ಭಾಷೆ ಅನಾದರಣೆಗೆ ಒಳಗಾಗುವು ಖಚಿತ ನಮ್ಮ ಚಿತ್ರರಂಗಕ್ಕೆ ನಮ್ಮವರೇ ಶತ್ರುಗಳಾಗುವುಉದ ಬೇಡ ಎಂದು ಜಗ್ಗೇಶ್ ಹೇಳಿದ್ದಾರೆ ಸಿನಿಮಾಗಾಗಿಯೇ ಬಾಳಿ ಬದುಕಿದ ಹಿರಿಯ, ಕಿರಿಯರು ಒಂದು ವೇದಿಕೆ ರಚಿಸಿ ನಿಸ್ವಾರ್ಥ ಯತ್ನ ಮಾಡಿದರೆ ಮಾತ್ರ ಉದ್ಯಮ ಶಾಶ್ವತವಾಗಿ ಉಳಿಯಲಿದೆ ಎಂದು ಅವರು ಕಿವಿಮಾತು ಹೇಳಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 