ಸರಕಾರ ಹೋರಾಟ ಹತ್ತಿಕ್ಕಲು ಪ್ರಯತ್ನಿಸಿದರೆ ಉಗ್ರ ಹೋರಾಟ : ರುದ್ರಗೌಡ
If the government tries to suppress the struggle, there will be fierce struggle: Rudragowda
ಕೊಪ್ಪಳ 02: ಬೆಳಗಾವಿ ಸುವರ್ಣಸೌಧಕ್ಕೆ ಪಂಚಮಸಾಲಿ ಸಮಾಜದಿಂದ 2ಂ ಮೀಸಲಾತಿಗಾಗಿ ಮುತ್ತಿಗೆ ಹಾಕಲು ನಿರ್ಧರಿಸಿದ್ದು ಸರಕಾರ ಏನಾದರೂ ಹೋರಾಟ ಹತ್ತಿಕ್ಕಲು ಪ್ರಯತ್ನಿಸಿದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಪಂಚ ಸೇನಾ ರಾಜ್ಯಾಧ್ಯಕ್ಷ ರುದ್ರಗೌಡ ಸೆಾಲಬಗೌಡ್ರ ಹೇಳಿದರು.
ಅವರು ರವಿವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ಯೇಶಿಸಿ ಮಾತನಾಡಿ ಅಧಿವೇಶನದ ಪ್ರಾರಂಭದ ದಿನದಂದು ಐದು ಸಾವಿರಕ್ಕೂ ಹೆಚ್ಚು ಟ್ಯಾಕ್ಟರ್ ಹಾಗೂ ರೈತರಿಂದ ಮುತ್ತಿಗೆ ಹಾಕಲಾಗುವುದು ,ಕಳೆದ ನಾಲ್ಕು ವರ್ಷಗಳಿಂದ ಪಂಚಮಸಾಲಿ 2ಂ ಹೋರಾಟ ನಿರಂತರವಾಗಿ ವಿಭಿನ್ನ ರೀತಿಗಳಲ್ಲಿ ನಡೆಯುತ್ತಿದ್ದರೂ ಸರ್ಕಾರ ನೋಡಿದರೂ ಕುರುಡರಂತೆ ಕೇಳಿದರೂ ಕಿವುಡರಂತೆ ವರ್ತಿಸುತ್ತಿದೆ, ಶ್ರೀಗಳು ಸಮುದಾಯವನ್ನು ಸಂಘಟಿಸಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಹೋರಾಟ ಮಾಡುತ್ತಿದ್ದಾರೆ.
ಈ ಹೋರಾಟ ಅಂತಿಮ ಹೋರಾಟ ಹಾಗೂ ಮಾಡು ಇಲ್ಲವೇ ಮಡಿ ಹೋರಾಟ ಆದರೆ ಪಂಚಮಸಾಲಿ ಸಮಾಜದ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಮುಂದಾದರೆ ಇದು ಸರ್ಕಾರಕ್ಕೂ ಮುಜುಗರ ಉಂಟುಮಾಡುತ್ತದೆ ಹಾಗೂ ನಮ್ಮ ಸಮುದಾಯವು ಸರ್ಕಾರದ ಮೇಲಿರುವ ನಂಬಿಕೆಯನ್ನು ಕಳೆದುಕೊಳ್ಳುತ್ತದೆ ಎಂದರು.ಸುದ್ದಿಗೋಷ್ಠಿಯಲ್ಲಿ ಪಂಚ ಸೇನಾ ಮುಖಂಡರಾದ ಮಂಜುನಾಥ್ ಈಶ್ವರ್ ಗೌಡ್ರು ,ಡಾ. ಮಹಾಂತೇಶ್ , ಶಿವಶರಣಪ್ಪ ಶಿವಪೂಜೆ, ಶರಣಪ್ಪ ಮೇಟಿ ಸೇರಿದಂತೆ ಮಚ್ಚೆತರೂ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 