ಲಾಕ್ ಡೌನ್ ಪರಿಹಾರವಲ್ಲ ಎಂದಾದರೆ, ಕಾಂಗ್ರೆಸ್ ಆಡಳಿತ ರಾಜ್ಯಗಳು ಏಕೆ ಪಾಲಿಸುತ್ತಿವೆ; ಬಿ.ಎಲ್. ಸಂತೋಷ್ ಪ್ರಶ್ನೆ
ನವದೆಹಲಿ, ಏ ೧6, ಕೊರೊನಾ ವೈರಸ್ ಸೋಂಕು ವ್ಯಾಪಿಸುವುದನ್ನು ತಡೆಯಲು ಲಾಕ್ ಡೌನ್ ಒಂದೇ ಪರಿಹಾರವಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. “ಲಾಕ್ ಡೌನ್ ಪರಿಹಾರವಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅದು ನಿಜವೇ ಆಗಿದ್ದರೆ, ಕಾಂಗ್ರೆಸ್ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಲಾಕ್ ಡೌನ್ ಏಕೆ ಪಾಲಿಸುತ್ತಿದ್ದಾರೆ..? ಎಂದು ಬಿ.ಎಲ್. ಸಂತೋಷ್ ಟ್ವೀಟರ್ ಮೂಲಕ ಗುರುವಾರ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಕೊರೊನಾವೈರಾಣು ಸೋಂಕು ಎದುರಿಸಲು ಲಾಕ್ ಡೌನ್ ಒಂದೇ ಪರಿಹಾರವಲ್ಲ, ಯೋಜಿತ ರೀತಿಯಲ್ಲಿ ವ್ಯಾಪಕವಾಗಿ ಕೊರೊನಾ ಪರೀಕ್ಷೆಗಳನ್ನು ನಡೆಸುವುದು ಇದಕ್ಕೇ ಸೂಕ್ತ ಪರಿಹಾರ ಎಂದು ಸಲಹೆ ನೀಡಿದ್ದರು. ದೇಶದಲ್ಲಿ ಪ್ರಸ್ತುತ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಕೂಡಲೇ ಪ್ರಮಾಣವನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಿ ಬೇಕು ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 