ಸತ್ಯ ನುಡಿದರೆ, ನಿಮ್ಮನ್ನು ಹುಚ್ಚ ಎನ್ನಲಾಗುತ್ತದೆ: ಯೂನಿಸ್
ಲಾಹೋರ್, ಮೇ 25,ಪಾಕಿಸ್ತಾನಕ್ಕೆ ಐಸಿಸಿ ಟಿ20 ವಿಶ್ವ ಕಪ್ ಗೆದ್ದುಕೊಟ್ಟ ಕೆಲವು ದಿನಗಳಲ್ಲಿ ನಾಯಕತ್ವ ತ್ಯಜಿಸಿದ ಮಾಜಿ ನಾಯಕ ಯೂನಿಸ್ ಖಾನ್, ತಾವು ನಾಯಕತ್ವ ತ್ಯಜಿಸಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಹಾಗೆಯೇ ಸತ್ಯ ಹೇಳಿದರೆ, ನಿಮ್ಮನ್ನು ಹುಚ್ಚ ಎಂದು ಪರಿಗಣಿಸುತ್ತಾರೆ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.ನಾಯಕತ್ವದ ಕುರಿತು ಗಲ್ಫ್ ನ್ಯೂಸ್ ಜತೆ ಮಾತನಾಡಿರುವ ಯೂನಿಸ್ ಖಾನ್, ಸತ್ಯ ಹೇಳಿದ ನಂತರ ನಿಮ್ಮನ್ನು ಹುಚ್ಚು ಮನುಷ್ಯ ಎಂದು ಕರೆದಿರುವ ಸನ್ನಿವೇಶಗಳನ್ನು ನಿಮ್ಮ ಜೀವನದಲ್ಲಿ ಸಾಕಷ್ಟು ಕಂಡಿದ್ದೀರಿ ಎಂಬ ಪ್ರಶ್ನೆಗೆ ಕೆಲವು ಆಟಗಾರರ ಗುಂಪು ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡುತ್ತಿಲ್ಲಎಂದು ಸೂಚಿಸಿದ್ದು, ನನ್ನ ತಪ್ಪಾಯಿತು ಎಂದು ಹೇಳಿಕೊಂಡಿದ್ದಾರೆ.ಕೆಲ ಸಮಯದ ನಂತರ ಆ ಆಟಗಾರರು ತಮ್ಮ ತಪ್ಪಿಗೆ ವಿಷಾಧಿಸಿದ್ದರು. ನಂತರ ನಾವೆಲ್ಲ ಒಂದು ತಂಡವಾಗಿ ಒಟ್ಟಿಗೆ ಆಡಿದ್ದೇವೆ. ಸತ್ಯ ಹೇಳುವುದು ಮತ್ತು ವಿನಮ್ರವಾಗಿರುವುದು ನಾನು ನನ್ನ ತಂದೆಯಿಂದ ಕಲಿತ ಪಾಠವಾಗಿದೆ ಎಂದಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 