ವಿವಿ ಗಳನ್ನು ಮುಚ್ಚಿದರೆ ದೇವಾಲಯ ಮುಚ್ಚಿದಂತೆ : ಮ್ಯಾಗೇರಿ
If the universities are closed, then the temple is closed: Mageri
ವಿವಿ ಗಳನ್ನು ಮುಚ್ಚಿದರೆ ದೇವಾಲಯ ಮುಚ್ಚಿದಂತೆ : ಮ್ಯಾಗೇರಿ
ಶಿಗ್ಗಾವಿ 01 :ವಿಶ್ವವಿದ್ಯಾಲಯಗಳೆಂದರೆ ಜ್ಞಾನದ ದೇವಾಲಯಗಳು ಇವುಗಳನ್ನು ಮುಚ್ಚಲು ಹೊರಟರೆ ದೇವಸ್ಥಾನಗಳನ್ನು ಮುಚ್ಚಿದಂತೆ ಎಂದು ಶಿಗ್ಗಾವಿ ತಾಲೂಕ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷರಾದ ಶಿವಾನಂದ ಮ್ಯಾಗೇರಿ ಹೇಳಿದರು. ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು ಭವ್ಯ ಭಾರತ ಭವಿಷ್ಯ ರೂಪಿಸುವ ಶಕ್ತಿಗಳನ್ನು ಹುಟ್ಟು ಹಾಕುವ ದಿವ್ಯ ಜ್ಞಾನ ಕೇಂದ್ರಗಳೆಂದರೆ ಅವು ವಿಶ್ವವಿದ್ಯಾಲಯ ಜಿಲ್ಲೆಯಲ್ಲಿ ಬಡ ವಿದ್ಯಾರ್ಥಿ ವಿದ್ಯಾರ್ಥಿನಿಯರು ವ್ಯಾಸಂಗ ಮಾಡಲು ಮತ್ತು ತಮ್ಮ ತಮ್ಮ ಗುರಿ ಹಾಗೂ ಭವಿಷ್ಯ ರೂಪಿಸಿಕೊಳ್ಳುತ್ತಿರುವವರಿಗೆ ವಿವಿ ಮುಚ್ಚುವ ಶಬ್ದ ಕೇಳಿ ಬರ ಸಿಡಿಲು ಬಡಿದಂತಾಗಿದೆ ಬೆಳೆಯುವ ಸಿರಿಯನ್ನು ಮೊಳಕೆಯಲ್ಲಿಯೇ ಚಿವುಟುವಂತಾಗುತ್ತದೆ. ಎಲ್ಲ ರಂಗದಲ್ಲೂ ಶಿಕ್ಷಣ ಬಹಳ ಮುಖ್ಯ ಶೈಕ್ಷಣಿಕವಾಗಿ ಕ್ರಾಂತಿ ಮಾಡಿದ ರಾಜ್ಯ ಅಭಿವೃದ್ಧಿಯಲ್ಲಿ ಮುಂದು ಬರಲು ಸಾಧ್ಯವಿದೆ ಕಾರಣ ಸರಕಾರ ಎಚ್ಚೆತ್ತುಕೊಂಡು ಕೂಡಲೇ ವಿಶ್ವವಿದ್ಯಾಲಯ ಮುಚ್ಚುವ ವಿಚಾರ ಕೈಬಿಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 