ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ: ಆರ್ ಎಲ್ ಧರ್ಮಟ್ಟಿ
If we protect the environment, the environment will protect us: RL Dharmatti
ಯುರಗಟ್ಟಿ: ಪಂಚಭೂತಗಳಲ್ಲಿ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು. ತೆಂಗು, ಆಲದಮರ, ಬನ್ನಿಮರ, ಇನ್ನಿತರ ಮರಗಳನ್ನು ದೈವ ಸ್ವರೂಪಿಯಾಗಿ ಕಾಣುತ್ತಾರೆ. ಪರಿಸರವನ್ನು ನಾಶ ಮಾಡುವುದನ್ನು ಮನುಷ್ಯ ಬಿಟ್ಟಿಲ್ಲ.
ರಸ್ತೆಗಳ ಅಗಲೀಕರಣ, ಕೆರೆಗಳ ಮುಚ್ಚುವಿಕೆ, ಕಾಡಿನ ನಾಶ, ಇದೇ ರೀತಿ ಪ್ರಕೃತಿ ನಾಶ ಆಗುತ್ತಿದೆ. ಪ್ರಾಣಿ ಸಂಕುಲ ಮನುಷ್ಯ ಸಂಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದನ್ನು ತಪ್ಪಿಸಬೇಕಾದರೆ ಗಿಡಗಳನ್ನು ನಾಟಿ ಮಾಡಿ ಸಂರಕ್ಷಣೆ ಮಾಡುವುದು ಅಗತ್ಯವಾಗಿದೆ. ಧರ್ಮಸ್ಥಳ ಸಂಘವು ಕೇವಲ ಸಾಲ ಕೊಡುವದಷ್ಟೇ ಅಲ್ಲದೆ ನೂರಾರು ಜನಪಯೋಗಿ ಯೋಜನೆ ಕೈಗೆತ್ತಿ ಕೊಂಡಿದೆ. ದುಶ್ಚಟ ಮುಕ್ತ ಸಮಾಜ ನಿರ್ಮಿಸಲು ಜನಜಾಗೃತಿ ವೇದಿಕೆ ಮಾಡುತ್ತಿರುವದು ಶ್ಲಾಘನೀಯವಾಗಿದೆ ಎಂದು ಗ್ರಾ.ಪಂ. ಸದಸ್ಯರಾದ ಆರ್. ಎಲ್. ಧರ್ಮಟ್ಟಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಯರಗಟ್ಟಿ ಇವರ ವತಿಯಿಂದ ಶನಿವಾರ ಸರಕಾರಿ ಪ್ರೌಢ ಶಾಲೆ ಮುಗಳಿಹಾಳದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಮಾಜಿ ಸದಸ್ಯರಾದ ಶಿವಲೀಲಾ ದಳವಾಯಿ, ಮುಖ್ಯೋಪಾಧ್ಯಾಯ ಐ. ಜಿ. ಸುಬ್ಬಾಪೂರಮಠ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯರಗಟ್ಟಿ ಯೋಜನಾಧಿಕಾರಿ ಶ್ರೀಕಾಂತ್ ಎಂ, ಗ್ರಾ.ಪ.ಕಾರ್ಯದರ್ಶಿ ಕರೆಪ್ಪ ದೊಡ್ಡೆನ್ನವರ, ಮುಗಳಿಹಾಳ ಕೆಎಂಎಫ್ ಸದಸ್ಯರಾದ ಫಕೀರವ್ವ ಬಂಡಿಗಣಿ, ವಲಯದ ಮೇಲ್ವಿಚಾರಕರು ಶಶಿಕಲಾ ತಿರ್ಲಾಪುರ , ಧರ್ಮಸ್ಥಳ ಸಂಘದ ಮುಗಳಿಹಾಳ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನುರ್ಜಾನ ಮುಲ್ತಾನಿ, ಈರಮ್ಮ ಹಿರೇಮಠ, ಬಸಮ್ಮ ದಳವಾಯಿ, ರೇಣುಕಾ ಹರಿಜನ, ಸೇವಾದಾರರಾದ ಪ್ರವೀಣ್ ಸೊಪ್ಪಡ್ಲ
ಪ್ರೌಢ ಶಾಲೆಯ ಸರ್ವ ಸಿಬ್ಬಂದಿ ವರ್ಗ ಹಾಗೂ ಸಂಘದ ಸದಸ್ಯರು, ವಿದ್ಯಾರ್ಥಿಗಳು, ಸತೀಶ ಹುಲಕುಂದ ಸ್ವಾಗತಿಸಿದರು. ಗೂಳಪ್ಪ ಬಡಿಗೇರ ಕಾರ್ಯಕ್ರಮ ನಿರೂಪಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 