ಭಕ್ತಿಯಿಂದ ಭಜಿಸಿದರೆ ಭಗವಂತನ ಸಾಕ್ಷಾತ್ಕಾರ ಸಾಧ್ಯ
If worshipped with devotion, God-realization is possible
ಲೋಕದರ್ಶನ ವರದಿ
ದೇವರಹಿಪ್ಪರಗಿ 11: ಭಕ್ತಿಯಿಂದ ಭಜಿಸಿದರೆ ಭಗವಂತನ ಸಾಕ್ಷಾತ್ಕಾರ ಸಾಧ್ಯ ಎಂಬ ನಿದರ್ಶನಕ್ಕೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮನ ಚರಿತಾರ್ಥವೆ ಸಾಕ್ಷಿ’ ಎಂದು ದೇವರಹಿಪ್ಪರಗಿ ಪಟ್ಟಣದ ಜಡಿ ಮಠದ ಷ.ಬ್ರ.ಶ್ರೀ ಜಡಿ ಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.ತಾಲೂಕಿನ ಡೋಣಿ ಕಡಕೋಳ ಗ್ರಾಮದ ಶ್ರೀ ಮಡಿವಾಳೇಶ್ವರ ಗದ್ದುಗೆ ಹಿರೇಮಠದಲ್ಲಿ ನಡೆದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮನ ಮಹಾಪುರಾಣ ಕಾರ್ಯಕ್ರಮದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು, ಮನುಕುಲದ ಒಳಿತಿಗಾಗಿ ಜನಿಸಿ ಬಂದ ಜಗನ್ಮಾತೆ ಪಾರ್ವತಿ ದೇವಿಯ ಪ್ರತಿರೂಪ ಮಲ್ಲಮ್ಮ. ಧರ್ಮ, ದೇವರು, ಭಕ್ತಿ, ನೀತಿ, ಸಂಸ್ಕಾರ, ಸಂಸ್ಕೃತಿ, ಆಚಾರ, ವಿಚಾರ, ಶ್ರದ್ಧೆ ಮತ್ತು ಸಂಪ್ರದಾಯಗಳ ಶ್ರೇಷ್ಠತೆಯ ಮಹಾತಾಯಿ ಮಲ್ಲಮ್ಮ, ಬದುಕಿನ ಬವಣೆಗಳನ್ನು ಮೆಟ್ಟಿ ನಿಲ್ಲುವ ಮೂಲಕ ಭಕ್ತಿಯ ಮುಕ್ತಿಗೆ ಮುನ್ನುಡಿ ಬರೆದು ಭಗವಂತನನ್ನು ಸಾಕ್ಷಾತ್ಕಾರ ಮಾಡಿಕೊಂಡ ಹೇಮರೆಡ್ಡಿ ಮಲ್ಲಮ್ಮಳ ಬದುಕು ಪ್ರತಿಯೊಬ್ಬ ಮಹಿಳೆಯರಿಗೆ ಆದರ್ಶ ಅನುಕರಣೆಯಾಗಲಿ ಎಂದರು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಗುರು ಮಠದ ಶ್ರೀ ಮ.ನಿ.ಪ್ರ ಮಡಿವಾಳೇಶ್ವರ ಶ್ರೀಗಳು ವಹಿಸಿದ್ದರು. ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು ಗಣ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸುವರು.
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ 