ಇಷ್ಟಪಟ್ಟು ಓದಿದರೆ ಇಚ್ಛಿತ ಜೀವನ ಸಾಧ್ಯ: ಉಪತಹಶೀಲ್ದಾರ ಕಾಂಬಳೆ
If you enjoy reading, you can live the life you want: Sub-Tahsildar Kambale
ರಬಕವಿ-ಬನಹಟ್ಟಿ 16: ಆಯಾ ಕಾಲಘಟ್ಟಗಳಲ್ಲಿನ ನಮ್ಮ ಜವಾಬ್ದಾರಿಗಳನ್ನು ಮರೆತರೆ ಬದುಕು ಸುಂದರವಾಗದು. ವಿದ್ಯಾರ್ಥಿ ದೆಸೆಯಲ್ಲಿ ಕಷ್ಟ ಪಟ್ಟು ಓದದೇ ಇಷ್ಟ ಪಟ್ಟು ಓದಿದಲ್ಲಿ ಇಚ್ಛಿತ ಜೀವನ ನಿಮ್ಮದಾಗುತ್ತದೆಂದು ರಬಕವಿ-ಬನಹಟ್ಟಿ ಉಪತಹಶೀಲ್ದಾರ ಸದಾಶಿವ ಕಾಂಬಳೆ ಹೇಳಿದರು.
ಹನಗಂಡಿ ಗ್ರಾಮದ ಸರ್.ಸಿ.ವಿ.ರಾಮನ್ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಮಕ್ಕಳು ಶಾಲೆಯಿಂದ ಮನೆಗೆ ಮರಿಳಿದ ತಕ್ಷಣ ಅಂಡ್ರಾಯ್ಡ್ ಫೋನ್ ಬಳಸುತ್ತ ವೃಥಾ ಕಾಲಹರಣ ಮಾಡುವುದು ತರವಲ್ಲ. ಇಷ್ಟದ ಓದು ಕಷ್ಟವಾದಲ್ಲಿ ಭವಿತವ್ಯದ ಇಚ್ಛಿತ ಬದುಕು ನಿಮ್ಮದಾಗದು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಉತ್ತಮ ಸಂಸ್ಕಾರವಂತರಾಗಿ, ಸಮಾಜಕ್ಕೆ, ಪೋಷಕರಿಗೆ ಮತ್ತು ದೇಶಕ್ಕೆ ಹೆಮ್ಮೆಯ ಆಸ್ತಿಯಾಗಿ ಎಂದರು.
ಧುರೀಣ ಪ್ರಸನ್ನಕುಮಾರ ದೇಸಾಯಿ ಮಾತನಾಡಿ, ಶಾಲಾ ಮುಖ್ಯಸ್ಥ ದಿಗ್ಗೇವಾಡಿ ಮತ್ತವರ ತಂಡ ಮಾಜಿ ಸೈನಿಕರಿಗೆ, ಶಿಕ್ಷಕರಿಗೆ ಹಾಗೂ ವಿಶೇಷ ಸಾಧಕರಿಗೆ ಸನ್ಮಾನಿಸುವ ಮೂಲಕ ಗುರುತಿಸುವ ಕಾರ್ಯ ಮಾಡುತ್ತಿರುವದು ಶ್ಲಾಘನೀಯವೆಂದರು. ಮಹ್ಮದ್ ರಫೀಕ್ ದಿಗ್ಗೇವಾಡಿ, ರಂಜಾನ್ ದಿಗ್ಗೇವಾಡಿ ಸೇರಿದಂತೆ ಶಾಲಾ ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು. ಮಕ್ಕಳಿಂದ ಮನರಂಜನೆ ಕಾರ್ಯಕ್ರಮಗಳು ಜರುಗಿದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 