ಇಷ್ಟಪಟ್ಟು ಓದಿದರೆ ಇಚ್ಛಿತ ಜೀವನ ಸಾಧ್ಯ: ಉಪತಹಶೀಲ್ದಾರ ಕಾಂಬಳೆ
If you enjoy reading, you can live the life you want: Sub-Tahsildar Kambale
ರಬಕವಿ-ಬನಹಟ್ಟಿ 16: ಆಯಾ ಕಾಲಘಟ್ಟಗಳಲ್ಲಿನ ನಮ್ಮ ಜವಾಬ್ದಾರಿಗಳನ್ನು ಮರೆತರೆ ಬದುಕು ಸುಂದರವಾಗದು. ವಿದ್ಯಾರ್ಥಿ ದೆಸೆಯಲ್ಲಿ ಕಷ್ಟ ಪಟ್ಟು ಓದದೇ ಇಷ್ಟ ಪಟ್ಟು ಓದಿದಲ್ಲಿ ಇಚ್ಛಿತ ಜೀವನ ನಿಮ್ಮದಾಗುತ್ತದೆಂದು ರಬಕವಿ-ಬನಹಟ್ಟಿ ಉಪತಹಶೀಲ್ದಾರ ಸದಾಶಿವ ಕಾಂಬಳೆ ಹೇಳಿದರು.
ಹನಗಂಡಿ ಗ್ರಾಮದ ಸರ್.ಸಿ.ವಿ.ರಾಮನ್ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಮಕ್ಕಳು ಶಾಲೆಯಿಂದ ಮನೆಗೆ ಮರಿಳಿದ ತಕ್ಷಣ ಅಂಡ್ರಾಯ್ಡ್ ಫೋನ್ ಬಳಸುತ್ತ ವೃಥಾ ಕಾಲಹರಣ ಮಾಡುವುದು ತರವಲ್ಲ. ಇಷ್ಟದ ಓದು ಕಷ್ಟವಾದಲ್ಲಿ ಭವಿತವ್ಯದ ಇಚ್ಛಿತ ಬದುಕು ನಿಮ್ಮದಾಗದು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಉತ್ತಮ ಸಂಸ್ಕಾರವಂತರಾಗಿ, ಸಮಾಜಕ್ಕೆ, ಪೋಷಕರಿಗೆ ಮತ್ತು ದೇಶಕ್ಕೆ ಹೆಮ್ಮೆಯ ಆಸ್ತಿಯಾಗಿ ಎಂದರು.
ಧುರೀಣ ಪ್ರಸನ್ನಕುಮಾರ ದೇಸಾಯಿ ಮಾತನಾಡಿ, ಶಾಲಾ ಮುಖ್ಯಸ್ಥ ದಿಗ್ಗೇವಾಡಿ ಮತ್ತವರ ತಂಡ ಮಾಜಿ ಸೈನಿಕರಿಗೆ, ಶಿಕ್ಷಕರಿಗೆ ಹಾಗೂ ವಿಶೇಷ ಸಾಧಕರಿಗೆ ಸನ್ಮಾನಿಸುವ ಮೂಲಕ ಗುರುತಿಸುವ ಕಾರ್ಯ ಮಾಡುತ್ತಿರುವದು ಶ್ಲಾಘನೀಯವೆಂದರು. ಮಹ್ಮದ್ ರಫೀಕ್ ದಿಗ್ಗೇವಾಡಿ, ರಂಜಾನ್ ದಿಗ್ಗೇವಾಡಿ ಸೇರಿದಂತೆ ಶಾಲಾ ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು. ಮಕ್ಕಳಿಂದ ಮನರಂಜನೆ ಕಾರ್ಯಕ್ರಮಗಳು ಜರುಗಿದವು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 