ಗೋವು ಕಳ್ಳತನ ಮಾಡಿದರೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡು ಹಾರಿಸಲಾಗುವುದು : ಸಚಿವ ಮಂಕಾಳು ವೈದ್ಯ ಘೋಷಣೆ
If you steal a cow, you will be stopped in the circle and shot: Minister Mankalu Vaidya announced
ಗೋವು ಕಳ್ಳತನ ಮಾಡಿದರೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡು ಹಾರಿಸಲಾಗುವುದು : ಸಚಿವ ಮಂಕಾಳು ವೈದ್ಯ ಘೋಷಣೆ
ಕಾರವಾರ 03: ಗೋವು ಕಳ್ಳತನ ಮಾಡಿದರೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡು ಹಾರಿಸಲಾಗುವುದು ಎಂದು ಕಾರವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಘೋಷಿಸಿದರು.ಕಾರವಾರದ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಕೆಡಿಪಿ ಸಭೆಯ ನಂತರ ಪತ್ರಿಕಾಗೋಷ್ಠಿ ಮಾಡಿದ ಅವರು ನಮ್ಮ ಸರ್ಕಾರದಲ್ಲಿ ಗೋವು ಕಳ್ಳತನ ಮಾಡಿದವರನ್ನು ಹಿಡಿದು ಪ್ರಕರಣ ದಾಖಲಿಸಿ, ಜೈಲಿಗೆ ಕಳಿಸಿದ್ದೇವೆ. ಕಾನೂನು ಉಲ್ಲಂಘಿಸಿದವರನ್ನು ಹೇಗೆ ಶಿಕ್ಷಿಸಿದ್ದೇವೆ ಎಂಬುದನ್ನು ಸಮಾಜ ನೋಡಿದೆ. ಮುಂದೆ ಗೋವು ಕಳ್ಳತನ ಮಾಡಿದರೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡು ಹಾರಿಸಲಾಗುವುದು ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ , ಗೃಹಮಂತ್ರಿ ಬಗ್ಗೆ ಕುಮಟಾ ಶಾಸಕ ದಿನಕರ ಖಾನ್ ಹಗುರವಾಗಿ ಬಾಯಿಗೆ ಬಂದಂತೆ ಮಾತಾಡಿದ್ದಾರೆ. ಬಿಜೆಪಿ ಸರ್ಕಾರದ ಇದ್ದಾಗ ನಡೆದ ಗೋಕಳ್ಳರ ವಿರುದ್ಧ ಏನು ಕ್ರಮ ಕೈಗೊಂಡಿದ್ದಾರೆ? ಗೋವು ಕಳೆದುಕೊಂಡವರಿಗೆ ಎಷ್ಟು ಪರಿಹಾರ ನೀಡಿದ್ದಾರೆಂದು ಹೇಳಲಿ ನೋಡೋಣ ಎಂದು ಸವಾಲು ಹಾಲಿದರು. ಮುಖ್ಯ ಮಂತ್ರಿ, ಗೃಹಮಂತ್ರಿಗಳು ಗೋ ಕಳ್ಳರಿಗೆ ಸಹಕಾರ ನೀಡಿದ್ದಾರೆಂದು ದಿನಕರ ಶೆಟ್ಟಿ ಎನೇನೋ ಮಾತಾಡಿದ್ದಾರೆ. ಬಿಜೆಪಿಯವರಿಗೆ ಬಾಯಿಗೆ ಬಂದಂತೆ ಮಾತಾಡಿ, ಸುಳ್ಳು ಹೇಳುವುದು ಬಿಟ್ಟರೆ ಏನು ಬರುತ್ತದೆ. ನಾವು ಮತ್ತು ನಮ್ಮ ಸರ್ಕಾರ ಬಿಗಿ ಕ್ರಮ ಕೈಗೊಂಡದ್ದರಿಂದ ಸಾಲಕೋಡು ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳನ್ನು ಹಿಡಿಯಲಾಗಿದೆ. ತಪ್ಪಿಸಿಕೊಂಡ ಇನ್ನಿಬ್ಬರ ಸೆರೆಗೆ ಪ್ರಯತ್ನ ನಡೆದಿದೆ ಎಂದ ಸಚಿವ ವೈದ್ಯ ಎಸ್ಪಿ ಹಾಗೂ ಪೊಲೀಸರ ಕ್ರಮವನ್ನು ಮೆಚ್ಚಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 