ಅಜ್ಞಾನ ಅಂಧಕಾರ ದೂರ ಮಾಡುವವನೆ ಗುರು
ಲೋಕದರ್ಶನ ವರದಿ
ಬೆಳಗಾವಿ 04: ಭಕ್ತನ ಅಥವಾ ಶಿಷ್ಯನ ಅಜ್ಞಾನ ಅಂಧಕಾರ, ಮೂಢನಂಬಿಕೆಗಳನ್ನು ದೂರ ಮಾಡಿ, ಬಾಳಿನಲ್ಲಿ ಬೆಳಕು ಕರುಣಿಸುವವನು ಶ್ರೇಷ್ಠ ಗುರು. ಅಂಥ ಗುರುವಿನ ಅನುಗ್ರಹದಿಂದ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕೆಂದು ಕಾರಂಜಿಮಠದ ಗುರುಸಿದ್ಧ ಮಹಾಸ್ವಾಮಿಗಳು ಹೇಳಿದರು.
ಅವರು ತಮ್ಮ ಶ್ರೀಮಠದಲ್ಲಿ ಪ್ರತಿ ತಿಂಗಳು ಮೊದಲನೇ ಸೋಮವಾರದಂದು ನಡೆಯುವ 215ನೇ ಮಾಸಿಕ ಶಿವಾನುಭವ ಕಾರ್ಯಕ್ರಮದ ಸಾನಿಧ್ಯವಹಿಸಿ ಪ್ರಸಾದವಾಣಿ ದಯಪಾಲಿಸಿದರು.
ಮಲ್ಲೂರಿನ ಪ್ರಣವಂ ಫೌಂಡೇಶನ್ದ ಸಂಸ್ಥಾನಕ ನಿಶ್ಚಲ ಸ್ವರೂಪಾನಂದ ಸ್ವಾಮಿಗಳು ಆಧ್ಯಾತ್ಮ ಚಿಂತನ ಕುರಿತು ಮೌಲಿಕವಾದ ಉಪನ್ಯಾಸ ನೀಡಿದರು. ಶ್ರೀಮಠದ ಉತ್ತರಾಧಿಕಾರಿ ಶಿವಯೋಗಿ ದೇವರು ಸಮ್ಮುಖ ವಹಿಸಿ ಆಶೀರ್ವಚನ ನೀಡಿದರು.
ಮಹಾನಗರ ಪಾಲಿಕೆ ಸದಸ್ಯೆ ಸರಳಾ ಹೇರೇಕರ್, ಶರಣರಾದ ಎಸ್. ಎ. ವಿಭೂತಿ, ವಿಜಯಶಾಸ್ತ್ರಿ ಹಿರೇಮಠ, ಮುಂತಾದವರು ಪಾಲ್ಗೊಂಡಿದ್ದರು. ಉಮನ್ಯಾಸಕ ಎ. ಕೆ. ಪಾಟೀಲ ಸ್ವಾಗತಿಸಿ, ನಿರೂಪಿಸಿದರು. ರಾಜು ಪಡಗುರಿ ಗ್ರಂಥ ಪುಷ್ಪಾರ್ಪಣೆ, ವಕೀಲರಾದ ವಿ. ಕೆ. ಪಾಟೀಲ ಶರಣು ಸಮರ್ಪಣೆ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 