ಅಜ್ಞಾನ ಅಂಧಕಾರ ದೂರ ಮಾಡುವವನೆ ಗುರು
ಲೋಕದರ್ಶನ ವರದಿ
ಬೆಳಗಾವಿ 04: ಭಕ್ತನ ಅಥವಾ ಶಿಷ್ಯನ ಅಜ್ಞಾನ ಅಂಧಕಾರ, ಮೂಢನಂಬಿಕೆಗಳನ್ನು ದೂರ ಮಾಡಿ, ಬಾಳಿನಲ್ಲಿ ಬೆಳಕು ಕರುಣಿಸುವವನು ಶ್ರೇಷ್ಠ ಗುರು. ಅಂಥ ಗುರುವಿನ ಅನುಗ್ರಹದಿಂದ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕೆಂದು ಕಾರಂಜಿಮಠದ ಗುರುಸಿದ್ಧ ಮಹಾಸ್ವಾಮಿಗಳು ಹೇಳಿದರು.
ಅವರು ತಮ್ಮ ಶ್ರೀಮಠದಲ್ಲಿ ಪ್ರತಿ ತಿಂಗಳು ಮೊದಲನೇ ಸೋಮವಾರದಂದು ನಡೆಯುವ 215ನೇ ಮಾಸಿಕ ಶಿವಾನುಭವ ಕಾರ್ಯಕ್ರಮದ ಸಾನಿಧ್ಯವಹಿಸಿ ಪ್ರಸಾದವಾಣಿ ದಯಪಾಲಿಸಿದರು.
ಮಲ್ಲೂರಿನ ಪ್ರಣವಂ ಫೌಂಡೇಶನ್ದ ಸಂಸ್ಥಾನಕ ನಿಶ್ಚಲ ಸ್ವರೂಪಾನಂದ ಸ್ವಾಮಿಗಳು ಆಧ್ಯಾತ್ಮ ಚಿಂತನ ಕುರಿತು ಮೌಲಿಕವಾದ ಉಪನ್ಯಾಸ ನೀಡಿದರು. ಶ್ರೀಮಠದ ಉತ್ತರಾಧಿಕಾರಿ ಶಿವಯೋಗಿ ದೇವರು ಸಮ್ಮುಖ ವಹಿಸಿ ಆಶೀರ್ವಚನ ನೀಡಿದರು.
ಮಹಾನಗರ ಪಾಲಿಕೆ ಸದಸ್ಯೆ ಸರಳಾ ಹೇರೇಕರ್, ಶರಣರಾದ ಎಸ್. ಎ. ವಿಭೂತಿ, ವಿಜಯಶಾಸ್ತ್ರಿ ಹಿರೇಮಠ, ಮುಂತಾದವರು ಪಾಲ್ಗೊಂಡಿದ್ದರು. ಉಮನ್ಯಾಸಕ ಎ. ಕೆ. ಪಾಟೀಲ ಸ್ವಾಗತಿಸಿ, ನಿರೂಪಿಸಿದರು. ರಾಜು ಪಡಗುರಿ ಗ್ರಂಥ ಪುಷ್ಪಾರ್ಪಣೆ, ವಕೀಲರಾದ ವಿ. ಕೆ. ಪಾಟೀಲ ಶರಣು ಸಮರ್ಪಣೆ ಮಾಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 