ಬೈಯ್ದವರನ್ನು ನಿರ್ಲಕ್ಷಿಸುವುದು ಸಕಾರಾತ್ಮಕ ಮನೋವೃತ್ತಿ: ಪ್ರೊ. ಕಡ್ಡಿ
Ignoring those who scold you is a positive attitude: Prof. Kadi
ಜಮಖಂಡಿ 09: ಬೈಯ್ದವರಿಗೆ ತಿರುಗಿ ಬೈಯ್ಯುವುದು ನಕಾರಾತ್ಮಕ ಮನೋವೃತ್ತಿ. ಬೈಯ್ದವರನ್ನು ನಿರ್ಲಕ್ಷಿಸುವುದು ಸಕಾರಾತ್ಮಕ ಮನೋವೃತ್ತಿ. ಆದರೆ, ಬೈಯ್ದವರನ್ನು ಬಂಧು ಎಂದು ಒಪ್ಪಿಕೊಳ್ಳುವುದು ಅತ್ಯುತ್ತಮ ಮನೋವೃತ್ತಿ. ವಿಶ್ವದಲ್ಲಿಯೇ ಈ ಬಸವತತ್ತ-್ವ ವಿನೂತನ ಎನಿಸಿದೆ ಎಂದು ಬಸವಜ್ಯೋತಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ಹೇಳಿದರು.
ಶ್ರಾವಣ ಮಾಸದ ನಿಮಿತ್ತ ಓಲೆಮಠದ ಆಶ್ರಯದಲ್ಲಿ ಜರುಗುತ್ತಿರುವ ಓಣಿಗೊಂದು ದಿನ ವಚನ ಶ್ರಾವಣ ಅಂಗವಾಗಿ ದಾನಮ್ಮದೇವಿ ಸಮುದಾಯ ಭವನದಲ್ಲಿ ನಡೆದ 10ನೇ ದಿನದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಬಸವಣ್ಣನವರ ಬೈಯ್ದವರೆನ್ನ ಬಂಧುಗಳೆಂಬೆ ವಚನ ಕುರಿತು ವಿಶೇಷ ಉಪನ್ಯಾಸ ನೀಡಿದರು.
ತಪ್ಪು ಮಾಡಿದಾಗ ಯಾರಾದರೂ ಟೀಕಿಸಿದರೆ ತಪ್ಪನ್ನು ತಿದ್ದಿಕೊಳ್ಳಬೇಕು. ಅಂತಹ ಸಂದರ್ಭದಲ್ಲಿ ಟೀಕಿಸಿದವರಿಗೆ ಧನ್ಯವಾದ ಹೇಳಬೇಕು. ಆದರೆ, ಸಾಧನೆಯನ್ನು ಸಹಿಸಿಕೊಳ್ಳದವರ, ಸತ್ಯವನ್ನು ಅರಗಿಸಿಕೊಳ್ಳದವರ ಟೀಕೆಗಳಿಗೆ ಪ್ರತಿಕ್ರಿಯಿಸಿದರೆ ಸಾಧನೆ ಕುಂಠಿತಗೊಳ್ಳುತ್ತದೆ. ಆದ್ದರಿಂದ ಟೀಕೆಗಳಿಗೆ ಹೆದರಬಾರದು, ಹಿಮ್ಮೆಟ್ಟಬಾರದು. ಹಣ್ಣು ಕೊಡುವ ಮಾವಿನ ಮರಕ್ಕೆ ಕಲ್ಲು ಎಸೆಯುತ್ತಾರೆ ಹೊರತು ಜಾಲಿಗಿಡಕ್ಕಲ್ಲ ಎಂದರು.
ಓಲೆಮಠದ ಆನಂದ ದೇವರು ಶ್ರೀಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ದಾನಮ್ಮದೇವಿ ದೇವಸ್ಥಾನದ ಟ್ರಸ್ಟ್ನ ಅಧ್ಯಕ್ಷ ಸುಭಾಸ ಅನಂತಪೂರ, ಸದಾನಂದ ಬಾಗೇವಾಡಿ, ಮಲ್ಲು ಮುದಕನ್ನವರ, ಬಸವರಾಜ ಬಳಗಾರ ಇದ್ದರು. ಸರಸ್ವತಿ ಸಬರದ(ಹೆಗಡಿ), ಗೋಪಾಲ ತುಳಜಾಪೂರ ಸಂಗೀತ ಸೇವೆ ಸಲ್ಲಿಸಿದರು. ವಕೀಲ ಸಿ.ಎಸ್. ಬಾಂಗಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲು ಗಣಾಚಾರಿ ನಿರೂಪಿಸಿದರು. ಬಸವರಾಜ ಬಳಗಾರ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 