ಅಕ್ರಮ ಸಂಬಂಧ: ಕಾರು ಚಾಲಕನ ಹತ್ಯೆ ಆರೋಪಿ ಸೆರೆ
ಬೆಂಗಳೂರು, ಫೆ 10, ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಕಾರು ಚಾಲಕನ ಹತ್ಯೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಸುನೀಲ್, ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಸೇಡಿಗಾಗಿ ತಾನೇ ಈ ಕೊಲೆ ಮಾಡಿರುವುದಾಗಿ ಆರೋಪಿ ರವಿ ಪೊಲೀಸರ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದಾನೆ.
ಪತ್ನಿ ಹಾಗೂ ಸುನೀಲ್ ನನ್ನು ಹಲವು ಬಾರಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದೆ. ಅಲ್ಲದೇ, ಸುನೀಲ್ ಗೆ ಬುದ್ಧಿವಾದ ಹೇಳಿ ಎಚ್ಚರಿಕೆ ಸಹ ನೀಡಿದ್ದೆ. ಆದರೆ, ತನಗೆ ಎಲ್ಲರ ಪರಿಚಯವಿದೆ ಎಂಬ ಕಾರಣಕ್ಕೆ ಸುನೀಲ್ ನನ್ನ ಮಾತು ಕೇಳಿರಲಿಲ್ಲ. ಹೀಗಾಗಿ ಆತನನ್ನು ಕೊಲೆಮಾಡಿರುವುದಾಗಿ ಆರೋಪಿ ರವಿ ಪೊಲೀಸರಿಗೆ ತಿಳಿಸಿದ್ದಾನೆ.
ಕಳೆದ ಎರಡು ದಿನಗಳ ಹಿಂದೆ ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಅಂತರಸಂತೆಯಲ್ಲಿನ ಬೇಕರಿ ಮುಂದೆ ಚಾಲಕ ಸುನೀಲ್ ನಿಂತಿದ್ದಾಗ, ಆರೋಪಿ ರವಿ ಆತನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಸುನೀಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದರು.ಸಿಸಿಟಿವಿ ದೃಶ್ಯವಾಳಿ ಆಧರಿಸಿ, ಆರೋಪಿ ರವಿಯನ್ನು ಬೀಚನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 