ಅಕ್ರಮ ಗೋಮಾಂಸ ಸಾಗಾಟ: ವಾಹನ ವಶಕ್ಕೆ
Illegal beef transportation: Vehicle seized
ಲೋಕದರ್ಶನ ವರದಿ
ಅಕ್ರಮ ಗೋಮಾಂಸ ಸಾಗಾಟ: ವಾಹನ ವಶಕ್ಕೆ
ಬೆಳಗಾವಿ : ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಪತ್ತೆ ಮಾಡಿರುವ ಶ್ರೀರಾಮ ಸೇನೆಯ ಕಾರ್ಯಕರ್ತರು ಚಾಲಕ ಸಮೇತ ವಾಹನವನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬುಧವಾರ ನಡೆದಿದೆ.
ಬೆಳಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದ ಸಿಗ್ನಲ್’ನಲ್ಲಿ ಬೋಲೆರೋ ಟೆಂಪೋ ವಾಹನ ನಿಂತುಕೊಂಡಿತ್ತು. ಅದರಿಂದ ಬೀರುವ ವಾಸನೆಯಿಂದ ಸಂಶಯಗೊಂಡು, ಅದನ್ನ ತಡೆಹಿಡಿದು ಪರೀಶೀಲಿಸಿದಾಗ, ಅದರಲ್ಲಿ ಗೋಮಾಂಸವಿರುವುದು ಕಂಡು ಬಂದಿದೆ. ಕೂಡಲೇ ಈ ವಿಷಯವನ್ನು ಎಪಿಎಂಸಿ ಪೊಲೀಸರ ಗಮನಕ್ಕೆ ತರಲಾಯಿತು.
ಚಾಲಕನನ್ನು ವಿಚಾರಿಸಿದಾಗ ಕ್ಯಾಂಪನಿಂದ ಗೋಮಾಂಸವನ್ನು ಬೇರೆಡೆ ಸಾಗಿಸಲಾಗುತ್ತಿತ್ತೆಂದು ತಿಳಿದು ಬಂದಿದೆ. ಸರ್ಕಾರ ಗೋಹತ್ಯೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ರವಿಕುಮಾರ್ ಕೋಕಿತಕರ ಆಗ್ರಹಿಸಿದರು. ಈ ವೇಳೆ ಶ್ರೀರಾಮಸೇನೆಯ ಕಾರ್ಯಕರ್ತರು ಭಾಗಿಯಾಗಿದ್ದರು. ಸದ್ಯ ವಾಹನ ಚಾಲಕ ಮತ್ತು ವಾಹನವನ್ನು ಎಪಿಎಂಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 