ಅಕ್ರಮ ಗೋಮಾಂಸ ಸಾಗಾಟ: ವಾಹನ ವಶಕ್ಕೆ
Illegal beef transportation: Vehicle seized
ಲೋಕದರ್ಶನ ವರದಿ
ಅಕ್ರಮ ಗೋಮಾಂಸ ಸಾಗಾಟ: ವಾಹನ ವಶಕ್ಕೆ
ಬೆಳಗಾವಿ : ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಪತ್ತೆ ಮಾಡಿರುವ ಶ್ರೀರಾಮ ಸೇನೆಯ ಕಾರ್ಯಕರ್ತರು ಚಾಲಕ ಸಮೇತ ವಾಹನವನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬುಧವಾರ ನಡೆದಿದೆ.
ಬೆಳಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದ ಸಿಗ್ನಲ್’ನಲ್ಲಿ ಬೋಲೆರೋ ಟೆಂಪೋ ವಾಹನ ನಿಂತುಕೊಂಡಿತ್ತು. ಅದರಿಂದ ಬೀರುವ ವಾಸನೆಯಿಂದ ಸಂಶಯಗೊಂಡು, ಅದನ್ನ ತಡೆಹಿಡಿದು ಪರೀಶೀಲಿಸಿದಾಗ, ಅದರಲ್ಲಿ ಗೋಮಾಂಸವಿರುವುದು ಕಂಡು ಬಂದಿದೆ. ಕೂಡಲೇ ಈ ವಿಷಯವನ್ನು ಎಪಿಎಂಸಿ ಪೊಲೀಸರ ಗಮನಕ್ಕೆ ತರಲಾಯಿತು.
ಚಾಲಕನನ್ನು ವಿಚಾರಿಸಿದಾಗ ಕ್ಯಾಂಪನಿಂದ ಗೋಮಾಂಸವನ್ನು ಬೇರೆಡೆ ಸಾಗಿಸಲಾಗುತ್ತಿತ್ತೆಂದು ತಿಳಿದು ಬಂದಿದೆ. ಸರ್ಕಾರ ಗೋಹತ್ಯೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ರವಿಕುಮಾರ್ ಕೋಕಿತಕರ ಆಗ್ರಹಿಸಿದರು. ಈ ವೇಳೆ ಶ್ರೀರಾಮಸೇನೆಯ ಕಾರ್ಯಕರ್ತರು ಭಾಗಿಯಾಗಿದ್ದರು. ಸದ್ಯ ವಾಹನ ಚಾಲಕ ಮತ್ತು ವಾಹನವನ್ನು ಎಪಿಎಂಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 