ಅಕ್ರಮ ಮಧ್ಯ ಮಾರಾಟ: ಕಣ್ಣುಮುಚ್ಚಿ ಕುಳಿತ ಅಧಿಕಾರಿಗಳು
Illegal middlemen: Officials turn a blind eye
ಹುಕ್ಕೇರಿ 06: ಹುಕ್ಕೇರಿ ತಾಲೂಕಿನ ಹಳ್ಳಿ ಹಳ್ಳಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟ ದಂಧೆ ರಾಜಾರೋಷವಾಗಿ ನಡೆಯುತ್ತಿದ್ದು, ಅಬಕಾರಿ ಇಲಾಖೆಯ ಅಧಿಕಾರಿಗಳು ಮಾರಾಟ ಮಾಡುವವರ ವಿರುದ್ಧ ಕಡಿವಾಣ ಹಾಕದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಹಗಲು ರಾತ್ರಿ ಎನ್ನದೆ 24 ಗಂಟೆಗಳಲ್ಲಿ ಸಾರಾಯಿ ಆಕ್ರಮ ಮಧ್ಯ ಮಾರಾಟ ಮಾಡುತ್ತಿದ್ದು, ಕೆಲವು ಬಾರ್ ಗಳಲ್ಲಿ ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಮದ್ಯ ಸಾಗಾಟ ಮಾಡುತ್ತಿದ್ದು, ಅಧಿಕಾರಿಗಳು ಕಂಡು ಕಾಣದಂತೆ ಬೇಜಾವಾಬ್ದಾರಿ ತನ ಕರ್ತವ್ಯ ನಿರ್ವಹಿಸುತ್ತಿರುವುದು ಕಂಡು ಬರುತ್ತಿದೆ. ಗ್ರಾಮಗಳಲ್ಲಿ ಮಧ್ಯ ಮಾರಾಟ ಮಾಡುವುದರಿಂದ ಯುವಕರು ಕುಡಿತದ ಚಟಕ್ಕೆ ಮಾರುಹೋಗಿ ಅನೇಕ ಕುಟುಂಬಗಳು ಬೀದಿ ಪಾಲಾಗಿವೆ ಹಾಗೂ ಅನೇಕ ಯುವಕರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮಧ್ಯ ಮಾರಾಟ ಮಾಡುವವರ ವಿರುದ್ಧ ಕಡಿವಾಣ ಹಾಕಿ ಸೂಕ್ತ ಕ್ರಮಜರುಗಿಸಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಮಧ್ಯ ಮಾರಾಟದಿಂದ ಅಕ್ಕಪಕ್ಕದಲ್ಲಿ ಇರುವ ಅಂಗಡಿಗಳಿಗೂ ಹಾಗೂ ಮನೆಗಳಿಗೂ ತುಂಬಾ ತೊಂದರೆಯಾಗುತ್ತಿದೆ. ವಿವಿಧ ಹಳ್ಳಿಯಲ್ಲಿ ನಾಯಿಕೊಡೆಯಂತೆ ತೆಲೆ ಎತ್ತಿರುವ ಅಕ್ರಮ ಮದ್ಯ ಅಂಗಡಿಗಳಿಗೆ ಮದ್ಯ ಮಾರಟ ಸರಬರಾಜು ಮಾಡುತ್ತಿದ್ದು, ಅಬಕಾರಿ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಮೌನವಾಗಿದ್ದಾರೆ.
ಅಬಕಾರಿ ಇಲಾಖೆ ಸಿಬ್ಬಂದಿಗಳಿಂದ ಕಾಟಾಚಾರಕ್ಕೆ ಗ್ರಾಮಗಳಿಗೆ ತೆರಳಿ ಜಾನ ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳು: ಗ್ರಾಮಗಳಲ್ಲಿ ಮುಖ್ಯ ರಸ್ತೆಯ ಪಕ್ಕದಲ್ಲಿ ಮಾರಾಟಗಾರರು ರಾಜಾರೋಷವಾಗಿ ತೆಲೆ ಎತ್ತಿರುವ ಅಕ್ರಮ ಮಧ್ಯ ಮಾರಾಟ ಮಾಡುವುದರಿಂದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಇನ್ನೂ ಅಧಿಕಾರಿಗಳು ಕಾಟಾಚಾರಕ್ಕೆ ಎಂಬಂತೆ ಅಲ್ಲಲ್ಲಿ ದಾಳಿ ಮಾಡಿ ಕೈ ತೊಳೆದುಕೊಳ್ಳುತ್ತಿದ್ದಾರೆ. ವರ್ಷಕ್ಕೆ ಕೇವಲ ಬೆರಳೆಣಿಕೆಯನ್ನು ಪ್ರಕರಣಗಳು ಮಾತ್ರ ದಾಖಲಾಗಿದೆ.
ಹುಕ್ಕೇರಿ ತಾಲೂಕಿನಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದು, ಮಧ್ಯ ಮಾರಾಟ ವಿಷಯಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಅಧಿಕಾರಿ ಅವರಿಗೆ ವಿಷಯ ತಿಳಿಸಿದರೂ ಹಾರಿಕೆ ಉತ್ತರ ನೀಡುತ್ತಿದ್ದು, ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಎಚ್ಚೆತ್ತುಕೊಂಡು ಅಧಿಕಾರಿಗಳು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕಾದು ನೋಡಬೇಕು???
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 