ಬೆಳಗಾವಿ-ಖಾನಾಪುರದಲ್ಲಿ ಅಕ್ರಮ ಗಣಿಗಾರಿಕೆ: ಡಿಸಿಗೆ ದೂರು
Illegal mining in Belgaum-Khanapur: Complaint to DC
ಖಾನಾಪುರ 31: ಬೆಳಗಾವಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ದಂಧೆ ನಡೆಯುತ್ತಿದೆ. ಬೆಳಗುಂಡಿ, ಬಕನೂರು, ಬೀಜಗರ್ಣಿ, ಗೋಳ್ಯಾಳಿ, ಅಮಟೆ, ಬೆಟಗೇರಿ, ಕಿಣಯೆ, ಇನಾಮ ಬಡಸ್ ಹಾಗೂ ಖಾನಾಪುರ ತಾಲೂಕಿನ ತೋರಳಿ ಗ್ರಾಮಗಳಲ್ಲಿ ಈ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕೆಂದು ಮಂಗಳವಾರ ರಾಜಕುಮಾರ ಟೋಪಣ್ಣವರ ಹಾಗೂ ಸುಜೀತ್ ಮುಳಗುಂದ್ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಮಹಾರಾಷ್ಟ್ರದ ಸಮೀಪದ ಪ್ರದೇಶಗಳಿಗೆ ನೀಡಲಾದ ಗಣಿಗಾರಿಕೆ ಪಾಸ್ಗಳನ್ನು ದುರುಪಯೋಗಪಡಿಸಿಕೊಂಡು ಕರ್ನಾಟಕದ ಈ ಭಾಗಗಳಲ್ಲಿ ಬಾಕ್ಸೈಟ್, ಲೇಟರೈಟ್ ಮತ್ತು ಸಿಲಿಕಾ ಖನಿಜಗಳನ್ನು ವ್ಯಾಪಕವಾಗಿ ಅಕ್ರಮವಾಗಿ ತೆಗೆಯಲಾಗುತ್ತಿದೆ. ಖನಿಜಗಳನ್ನು ಡಾಲ್ಮಿಯಾ ಸಿಮೆಂಟ್ ಹಾಗೂ ಚೆಟ್ಟಿನಾಡ್ ಸಿಮೆಂಟ್ ಕಂಪನಿಗಳಿಗೆ ಸಾಗಿಸಲಾಗುತ್ತಿದೆ ಎಂಬ ಶಂಕೆ ಇದೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಕುಮಾರ್ ಟೋಪಣ್ಣವರ ಹೇಳಿದರು.
ಅಕ್ರಮ ಗಣಿಗಾರಿಕೆ ಹೆಚ್ಚಾಗಿ ರಾತ್ರಿ 2 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಡೆಯುತ್ತಿದ್ದು, ಅಧಿಕಾರಿಗಳ ಗಮನ ತಪ್ಪಿಸಲು ಈ ರೀತಿಯ ಕಾರ್ಯಾಚರಣೆ ನಡೆಯುತ್ತಿದೆ. ಭಾರೀ ಲಾರಿಗಳ ಸಂಚಾರ ಬೆಳಗಾವಿ ಹಾಗೂ ಖಾನಾಪುರ ಭಾಗದ ಪಶ್ಚಿಮ ರಸ್ತೆಗಳ ಮೇಲೆ ಹೆಚ್ಚಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಭಾಗಗಳು ಪರಿಸರದ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಾಗಿದ್ದು, ಅಕ್ರಮ ಗಣಿಗಾರಿಕೆಯಿಂದ ಅರಣ್ಯ ನಾಶ, ಭೂಗರ್ಭ ಜಲಮಟ್ಟ ಕುಸಿತ, ಮಣ್ಣು ಕೊಚ್ಚಿಹೋಗುವಿಕೆ ಸೇರಿದಂತೆ ಗಂಭೀರ ಪರಿಸರ ಹಾನಿ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ದೂರಿನಲ್ಲಿ ತಕ್ಷಣ ತನಿಖೆ ನಡೆಸಿ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 