ಕುರುವತ್ತಿ ಬಳಿ ಅಕ್ರಮ ಮರಳು ದಂಧಗೆ ಕಡಿವಾಣ
Illegal sand mining busted near Kuruvathi
ಹೂವಿನಹಡಗಲಿ 01: ಅಕ್ರಮ ಮರಳು ದಂಧಗೆ ಕಡಿವಾಣಕ್ಕೆ ಇದೀಗ ತಾಲ್ಲೂಕಿನ ಕುರುವತ್ತಿಬಳಿ ಶನಿವಾರ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ದಾಳಿ ನಡೆಸಿ, ತುಂಗಭದ್ರಾ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ವಶಪಡಿಸಿಕೊಂಡಿ-ದ್ದಾರೆ. ದಂಧೆಕೋರರು ನದಿ ತೀರದಲ್ಲಿ ಮರಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟಕ್ಕೆ ಕಳಿಸುತ್ತಿದ್ದ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲಿ ಸಂಗ್ರಹವಿದ್ದ ಮರಳನ್ನುಮೈಲಾರ ಪ್ರವಾಸಿ ಮಂದಿರ ಅವರಣಕ್ಕೆ ಸಾಗಣೆ ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.ದಂಧೆಕೋರರು ಮರಳು ಸಾಗಣೆಗಾಗಿ ನದಿ ಪಾತ್ರದಲ್ಲಿ ಅನಧಿಕೃತವಾಗಿ ರಸ್ತೆ ನಿರ್ಮಿಸಿಕೊಂಡಿ-ರುವುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಜೆಸಿಬಿ ಯಂತ್ರದಿಂದ ಕಂದಕ ತೋಡಿ ರಸ್ತೆಯನ್ನು ನಾಶಪಡಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಚಾಲಿತ ದಳದ ಕೀರ್ತಿ ಕುಮಾರ, ಭೂ ವಿಜ್ಞಾನಿ ಮಲ್ಲಯ್ಯ ಹಾಗೂ ಸಿಬ್ಬಂದಿ ದಾಳಿನಡೆಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 