ಅಕ್ರಮವಾಗಿ ಅಕ್ಕಿ ಸಾಗಾಟ:ಆಹಾರ ಇಲಾಖೆ ದಾಳಿ:ಅಕ್ಕಿ ವಶ
Illegal transportation of rice: Food Department raids, rice seized
ವಿಜಯಪುರ 07: ಜಯಪುರದ ಭೂತನಾಳ ಕೆರೆಯ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಭೂತನಾಳ ಕೆರೆ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ರೂ.7,83,760 ಮೌಲ್ಯದ 346 ಕ್ವಿಂಟಲ್ 26 ಕೆಜಿ ಅಕ್ಕಿ ಹಾಗೂ ಲಾರಿ ವಶಕ್ಕೆ ಪಡೆದು ಶೇಖರ ಮದ್ಯೆಯನ್ ಎಂಬುವವರ ಮೇಲೆ ಆದರ್ಶ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ದಾಳಿಯಲ್ಲಿ ಆಹಾರ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಮದೇವ ಚವ್ಹಾಣ, ಆಹಾರ ಇಲಾಖೆಯ ಆಹಾರ ನೀರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ,ಆದರ್ಶನಗರ ಪಿ ಎಸ್ ಐ ಪ್ರೇಮಾ ಕೂಚಬಾಳ ಹಾಗೂ ಎಎಸ್ಐ ವಿ.ಕೆ.ಪವಾರ ಹಾಗೂ ಆಹಾರ ಇಲಾಖೆ ಹಾಗೂ ಪೋಲಿಸ್ಸಿಬ್ಬಂದಿಗಳು ಇದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 