ಅನ್ನಭಾಗ್ಯ ಯೋಜನೆಯ ಅಕ್ಕಿಯ ಅಕ್ರಮ
Illegality of Annabhagya scheme rice
ಲೋಕದರ್ಶನ ವರದಿ
ಜಮಖಂಡಿ 26: ತಾಲೂಕಿನ ಹುನ್ನೂರ ಗ್ರಾಮದ ಮನೆಯೊಂದರಲ್ಲಿ ಸರಕಾರದಿಂದ ಹಂಚಿಕೆಯಾದ ಪಡಿತರ ಚೀಟಿಯ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಕಡಿಮೆ ಬೆಲೆಗೆ ಪಡೆದು ಅಕ್ರಮವಾಗಿ ಸಂಗ್ರಹಿಸಿಟ್ಟಿದ ಖಚಿತ ಮಾಹಿತಿ ಮೇರೆಗೆ ರಾತ್ರಿ ಸಮಯದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೋಲಿಸರು ಜಂಟಿಯಾಗಿ ದಾಳಿಯನ್ನು ನಡೆಸಿ. ಅಕ್ರಮವಾಗಿ ಸಂಗ್ರಹಿಸಿಟ್ಟಿದ ಅಕ್ಕಿಯ ಮಾಲನ್ನು ವಶಕ್ಕೆ ಪಡೆದುಕೊಂಡಿದಾರೆ.
ಹುನ್ನೂರ ಗ್ರಾಮದ ಗಾಂಧಿ ನಗರದ ಮನೆಯೊಂದರಲ್ಲಿ ಸರಕಾರದಿಂದ ಹಂಚಿಕೆಯಾದ ಅನ್ನಭಾಗ್ಯ ಯೋಜನೆಯ ಪಡಿತರ ಚೀಟಿಯ ಅಕ್ಕಿಯನ್ನು ಕಡಿಮೆ ಬೆಲೆಗೆ ಪಡೆದುಕೊಂಡು ಪಕ್ಕದ ಮಹಾರಾಷ್ಟ್ರಕ್ಕೆ ಹಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶವನ್ನು ಹೊಂದಿದ ಪಡಿತರ ಅಕ್ಕಿಯು ಸುಮಾರು 1 ಟನ್, 2 ಕ್ವೀಂಟಲ್ ಅಕ್ಕಿಯು ಸರಕಾರದ ಬೆಲೆಯ ಪ್ರಕಾರ 34,60. ರೂಗಳಂತೆ ಸುಮಾರು 41,520 ರೂ,ಗಳ ಅಕ್ಕಿಯನ್ನು ಸಂಗ್ರಹಿಸಿಟ್ಟಿದ ಮನೆಯ ಮೇಲೆ ಖಚಿತ ಮಾಹಿತಿ ಮೇರೆಗೆ ರಾತ್ರಿ ಸಮಯದಲ್ಲಿ ಆಹಾರ ಶಿರೆಸ್ತೇದಾರ ಎ.ಆರ್. ತಾಳಿಕೋಟಿ, ಜಮಖಂಡಿ ಗ್ರಾಮೀಣ ವಲಯ ಆಹಾರ ಶಿರಸ್ತೇದಾರ ಆನಂದ ರೇವು ರಾಠೋಡ ಮತ್ತು ಪೋಲಿಸ ಸಿಬಂಧಿಗಳು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆಯನ್ನು ಮಾಡಿ ಒಟ್ಟು 1 ಟನ್, 2 ಕ್ಚೀಂಟಲ್ ಅಕ್ಕಿಯು ಪ್ಲಾಸ್ಟಿಕ್ ಚೀಲಗಳಲ್ಲಿ 50 ಕೆಜಿಯಂತೆ ತುಂಬಿರುವ ಮಾಲನ್ನು ವಶಕ್ಕೆ ಪಡೆದುಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 