ಅನ್ನಭಾಗ್ಯ ಯೋಜನೆಯ ಅಕ್ಕಿಯ ಅಕ್ರಮ
Illegality of Annabhagya scheme rice
ಲೋಕದರ್ಶನ ವರದಿ
ಜಮಖಂಡಿ 26: ತಾಲೂಕಿನ ಹುನ್ನೂರ ಗ್ರಾಮದ ಮನೆಯೊಂದರಲ್ಲಿ ಸರಕಾರದಿಂದ ಹಂಚಿಕೆಯಾದ ಪಡಿತರ ಚೀಟಿಯ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಕಡಿಮೆ ಬೆಲೆಗೆ ಪಡೆದು ಅಕ್ರಮವಾಗಿ ಸಂಗ್ರಹಿಸಿಟ್ಟಿದ ಖಚಿತ ಮಾಹಿತಿ ಮೇರೆಗೆ ರಾತ್ರಿ ಸಮಯದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೋಲಿಸರು ಜಂಟಿಯಾಗಿ ದಾಳಿಯನ್ನು ನಡೆಸಿ. ಅಕ್ರಮವಾಗಿ ಸಂಗ್ರಹಿಸಿಟ್ಟಿದ ಅಕ್ಕಿಯ ಮಾಲನ್ನು ವಶಕ್ಕೆ ಪಡೆದುಕೊಂಡಿದಾರೆ.
ಹುನ್ನೂರ ಗ್ರಾಮದ ಗಾಂಧಿ ನಗರದ ಮನೆಯೊಂದರಲ್ಲಿ ಸರಕಾರದಿಂದ ಹಂಚಿಕೆಯಾದ ಅನ್ನಭಾಗ್ಯ ಯೋಜನೆಯ ಪಡಿತರ ಚೀಟಿಯ ಅಕ್ಕಿಯನ್ನು ಕಡಿಮೆ ಬೆಲೆಗೆ ಪಡೆದುಕೊಂಡು ಪಕ್ಕದ ಮಹಾರಾಷ್ಟ್ರಕ್ಕೆ ಹಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶವನ್ನು ಹೊಂದಿದ ಪಡಿತರ ಅಕ್ಕಿಯು ಸುಮಾರು 1 ಟನ್, 2 ಕ್ವೀಂಟಲ್ ಅಕ್ಕಿಯು ಸರಕಾರದ ಬೆಲೆಯ ಪ್ರಕಾರ 34,60. ರೂಗಳಂತೆ ಸುಮಾರು 41,520 ರೂ,ಗಳ ಅಕ್ಕಿಯನ್ನು ಸಂಗ್ರಹಿಸಿಟ್ಟಿದ ಮನೆಯ ಮೇಲೆ ಖಚಿತ ಮಾಹಿತಿ ಮೇರೆಗೆ ರಾತ್ರಿ ಸಮಯದಲ್ಲಿ ಆಹಾರ ಶಿರೆಸ್ತೇದಾರ ಎ.ಆರ್. ತಾಳಿಕೋಟಿ, ಜಮಖಂಡಿ ಗ್ರಾಮೀಣ ವಲಯ ಆಹಾರ ಶಿರಸ್ತೇದಾರ ಆನಂದ ರೇವು ರಾಠೋಡ ಮತ್ತು ಪೋಲಿಸ ಸಿಬಂಧಿಗಳು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆಯನ್ನು ಮಾಡಿ ಒಟ್ಟು 1 ಟನ್, 2 ಕ್ಚೀಂಟಲ್ ಅಕ್ಕಿಯು ಪ್ಲಾಸ್ಟಿಕ್ ಚೀಲಗಳಲ್ಲಿ 50 ಕೆಜಿಯಂತೆ ತುಂಬಿರುವ ಮಾಲನ್ನು ವಶಕ್ಕೆ ಪಡೆದುಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 