ಅನ್ನಭಾಗ್ಯ ಯೋಜನೆಯ ಅಕ್ಕಿಯ ಅಕ್ರಮ
Illegality of Annabhagya scheme rice
ಲೋಕದರ್ಶನ ವರದಿ
ಜಮಖಂಡಿ 26: ತಾಲೂಕಿನ ಹುನ್ನೂರ ಗ್ರಾಮದ ಮನೆಯೊಂದರಲ್ಲಿ ಸರಕಾರದಿಂದ ಹಂಚಿಕೆಯಾದ ಪಡಿತರ ಚೀಟಿಯ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಕಡಿಮೆ ಬೆಲೆಗೆ ಪಡೆದು ಅಕ್ರಮವಾಗಿ ಸಂಗ್ರಹಿಸಿಟ್ಟಿದ ಖಚಿತ ಮಾಹಿತಿ ಮೇರೆಗೆ ರಾತ್ರಿ ಸಮಯದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೋಲಿಸರು ಜಂಟಿಯಾಗಿ ದಾಳಿಯನ್ನು ನಡೆಸಿ. ಅಕ್ರಮವಾಗಿ ಸಂಗ್ರಹಿಸಿಟ್ಟಿದ ಅಕ್ಕಿಯ ಮಾಲನ್ನು ವಶಕ್ಕೆ ಪಡೆದುಕೊಂಡಿದಾರೆ.
ಹುನ್ನೂರ ಗ್ರಾಮದ ಗಾಂಧಿ ನಗರದ ಮನೆಯೊಂದರಲ್ಲಿ ಸರಕಾರದಿಂದ ಹಂಚಿಕೆಯಾದ ಅನ್ನಭಾಗ್ಯ ಯೋಜನೆಯ ಪಡಿತರ ಚೀಟಿಯ ಅಕ್ಕಿಯನ್ನು ಕಡಿಮೆ ಬೆಲೆಗೆ ಪಡೆದುಕೊಂಡು ಪಕ್ಕದ ಮಹಾರಾಷ್ಟ್ರಕ್ಕೆ ಹಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶವನ್ನು ಹೊಂದಿದ ಪಡಿತರ ಅಕ್ಕಿಯು ಸುಮಾರು 1 ಟನ್, 2 ಕ್ವೀಂಟಲ್ ಅಕ್ಕಿಯು ಸರಕಾರದ ಬೆಲೆಯ ಪ್ರಕಾರ 34,60. ರೂಗಳಂತೆ ಸುಮಾರು 41,520 ರೂ,ಗಳ ಅಕ್ಕಿಯನ್ನು ಸಂಗ್ರಹಿಸಿಟ್ಟಿದ ಮನೆಯ ಮೇಲೆ ಖಚಿತ ಮಾಹಿತಿ ಮೇರೆಗೆ ರಾತ್ರಿ ಸಮಯದಲ್ಲಿ ಆಹಾರ ಶಿರೆಸ್ತೇದಾರ ಎ.ಆರ್. ತಾಳಿಕೋಟಿ, ಜಮಖಂಡಿ ಗ್ರಾಮೀಣ ವಲಯ ಆಹಾರ ಶಿರಸ್ತೇದಾರ ಆನಂದ ರೇವು ರಾಠೋಡ ಮತ್ತು ಪೋಲಿಸ ಸಿಬಂಧಿಗಳು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆಯನ್ನು ಮಾಡಿ ಒಟ್ಟು 1 ಟನ್, 2 ಕ್ಚೀಂಟಲ್ ಅಕ್ಕಿಯು ಪ್ಲಾಸ್ಟಿಕ್ ಚೀಲಗಳಲ್ಲಿ 50 ಕೆಜಿಯಂತೆ ತುಂಬಿರುವ ಮಾಲನ್ನು ವಶಕ್ಕೆ ಪಡೆದುಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 