ಆಧುನಿಕ ಆಹಾರ ಪದ್ದತಿ ಯಿಂದ ಅನಾರೋಗ್ಯ
Illness due to modern diet
ಹೂವಿನಹಡಗಲಿ 12: ’ಆಧುನಿಕ ಆಹಾರ ಪದ್ದತಿ ಯಿಂದ ಅನಾರೋಗ್ಯ ತಡೆಯಲುಸಮತೋಲಿತ ಆಹಾರ ಪದ್ಧತಿ ಹಾಗೂ ಯೋಗ, ಪ್ರಾಣಾಯಾಮ, ಜೀವನಶೈಲಿ ಅಳವಡಿಸಿಕೊಂಡಲ್ಲಿ ರೋಗಗಳಿಂದ ಮುಕ್ತಿ ಪಡೆಯಬಹುದು’ ಎಂದು ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಸಂಶೋಧನಾ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್ ಪಾದೇಕಲ್ ಹೇಳಿದರು. ಪಟ್ಟಣದ ಲಿಟಲ್ ಚಾಂಪ್ಸ್ ಶಾಲೆಯಲ್ಲಿ ಶನಿವಾರ ಜನನಿ ಆಸ್ಪತ್ರೆ, ಪರಿಪೂರ್ಣ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
’ತುರ್ತು ಹಾಗೂ ಶಸ್ತ್ರಚಿಕಿತ್ಸೆ ಹೊರತುಪಡಿಸಿ ಎಲ್ಲ ರೋಗಗಳಿಗೆ ಓಷಧ ರಹಿತ ವೈದ್ಯಪದ್ಧತಿಯಲ್ಲಿ ಚಿಕಿತ್ಸೆ ಇದೆ. ಇದರ ಪ್ರಯೋಜನ ಪಡೆದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ರೋಗ ಬಾರದಂತೆ ತಡೆಯುವ, ರೋಗ ಗುಣಪಡಿಸುವ ಹಾಗೂ ದೇಹವನ್ನು ಸದೃಢಗೊಳಿಸುವ ಚಿಕಿತ್ಸೆಗಳು ಪ್ರಕೃತಿ ಚಿಕಿತ್ಸಾ ಪದ್ಧತಿಯಲ್ಲಿವೆ. ಈ ಕುರಿತು ಅರಿವು ಮೂಡಿಸಲು ಇಂತಹ ಶಿಬಿರ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.ಸಂಸ್ಥೆಯ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಉದಯಶಂಕರ ಭಟ್ ಮಾತನಾಡಿದರು.ಪರಿಪೂರ್ಣ ಎಜ್ಯುಕೇಶನಲ್ ಟ್ರಸ್ಟ್ ಆಡಳಿತಾಧಿಕಾರಿ ಜಿ.ಕೊಟ್ರೇಶ್, ಮುಖ್ಯಶಿಕ್ಷಕರಾದ ಜಿ.ಮಲ್ಲಿಕಾರ್ಜುನ, ಎಸ್.ಶಿಲ್ಪಾ, ಶಿಕ್ಷಕ ಸೊಪ್ಪಿನ ಪ್ರಭುಗೌಡ ಉಪಸ್ಥಿತರಿದ್ದರು. 250ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 