ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳ ಅನುಷ್ಠಾನ ಪಾರದರ್ಶಕವಾಗಿರಲಿ: ಎಚ್.ಎಂ. ರೇವಣ್ಣ
Implementation of Gruha Lakshmi and Gruha Jyothi schemes should be transparent: H.M. Revanna
ಗದಗ 17: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ’ಗೃಹಲಕ್ಷ್ಮಿ’ ಮತ್ತು ’ಗೃಹಜ್ಯೋತಿ’ ಯೋಜನೆಗಳ ಅನುಷ್ಠಾನವು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜಿಲ್ಲಾಡಳಿತ ಭವನದ ಕೇಸ್ವಾನ ಕಾನ್ಫರೆನ್ಸ್ ಹಾಲ್ ನಲ್ಲಿ ಶುಕ್ರವಾರ ಜುಲೈ (17) ರಂದು ಜರುಗಿದ ವಿಡಿಯೋ ಸಂವಾದದಲ್ಲಿ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳ ತಡೆ ಮತ್ತು ದುರುಪಯೋಗ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಮ್. ರೇವಣ್ಣ ಅಧಿಕಾರಿಗಳಿಗೆ ಸೂಚಿಸಿದರು.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಪ್ಪು ಮಾಹಿತಿ ನೀಡಿ ಗ್ಯಾರೆಂಟಿ ಯೋಜನೆಗಳ ಲಾಭ ಪಡೆದಿರುವವರಿಂದ ನಿಯಮಾನುಸಾರ ಹಣವನ್ನು ಹಿಂಪಡೆಯಲು ಮತ್ತು ಈ ಪ್ರಕ್ರಿಯೆಯನ್ನು ಎರಡು ವಾರಗಳೊಳಗೆ ಪೂರ್ಣಗೊಳಿಸಲು ನಿರ್ದೇಶನ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 